Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...