Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...