Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...