Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...