Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...