Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...