Homeಕರ್ನಾಟಕ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ..

21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ" ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

- Advertisement -
- Advertisement -

’ರಾಜಕೀಯ ಅನಕ್ಷರತೆಯ ನಿವಾರಣೆಗಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನೂತನವಾಗಿ ಆರಂಭವಾಗಲಿರುವ ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್‌ ಹುತಾತ್ಮ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್‌ 28 ರಂದು ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರು ’ದಿ ಪಾಲಿಟಿಕ್’ ಫೇಸ್‌ಬುಕ್ ಪೇಜ್ ಮೂಲಕ ಸೆಪ್ಟೆಂಬರ್‌ 28 ರಂದು ಸಂಜೆ 06:30 ಕ್ಕೆ ವೆಬ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಬಾನು ಮುಷ್ತಾಕ್, ಡಾ. ಸಿದ್ದನಗೌಡ ಪಾಟಿಲ್, ಇಂದೂಧರ ಹೊನ್ನಾಪುರ, ಅನಂತ ನಾಯಕ್ ಎನ್ ಭಾಗವಹಿಸಲಿದ್ದು ಪತ್ರಿಕೋದ್ಯಮದ ಪ್ರಚಲಿತ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

’’ಇದು ಜನರಾಜಕಾರಣದ ಚಿಂತನಾ ಚಾವಡಿಯಾಗಿದೆ, ರಾಜಕೀಯ ಎಂದರೆ ಅನೇಕರಿಗೆ ಅಸಹ್ಯ ಅನಿಸಬಹುದು. ಆಳುವ ರಾಜಕಾರಣದ ದುರ್ವಾಸನೆ ಜನರನ್ನು ರಾಜಕೀಯವೆಂದರೇನೇ ದೂರ ನಿಲ್ಲುವಂತೆ ಮಾಡಿರುವುದರಿಂದ ಇದು ಸಹಜವೆ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಆ ಹೊಲಸು ರಾಜಕಾರಣದ ಬಗ್ಗೆ ಅಲ್ಲ. ಬದಲಿಗೆ ಮೌಲ್ಯಗಳಲ್ಲಿ, ಮಾದರಿಯಲ್ಲಿ, ಮಾರ್ಗದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ನಿಜ ರಾಜಕಾರಣದ ಬಗ್ಗೆ” ಎಂದು ದಿ ಪಾಲಿಟಿಕ್ ಸಂಪಾದಕರಾದ ಸಿದ್ದಪ್ಪ ಮೂಲಗೆಯವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು

“ಈ ವೆಬ್‌ ಜರ್ನಲ್ ಬದಲಾವಣೆಯಲ್ಲಿ ವಿಶ್ವಾಸ ಹೊಂದಿರುವ, ಬದಲಾವಣೆಯ ಚಕ್ರಕ್ಕೆ ಹೆಗಲು ನೀಡಲು ಸಿದ್ಧವಿರುವ ಪ್ರಜ್ಞಾವಂತ, ರಾಜಕೀಯ ಕಾರ್ಯಕರ್ತರ ವೈಚಾರಿಕ ತಾಣವಾಗಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ, ಅಥವ ಒಂದು ಸಂಘಟನೆಯ, ಅಥವ ಒಂದು ಚಿಂತನೆಯ ವೆಬ್‌ಸೈಟ್ ಅಲ್ಲ. ಸರಿ ಮಾರ್ಗ ಹುಡುಕಲು ಶ್ರಮಿಸುತ್ತಿರುವ ಸಮಾನ ಮನಸ್ಕರ ಮುಕ್ತ ವೈಚಾರಿಕ ವೇದಿಕೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನದ ಕಹಿ ವಾಸ್ತವದ ಮೂಲವನ್ನು ಗ್ರಹಿಸಲು ಹಾಗೂ ಹೊಸ ನಾಳೆಯ ಹಾದಿಯನ್ನು ಹೊಸೆಯಲು ಶ್ರಮಿಸುವುದು ಈ ‘ವಿಚಾರ ಮಂಟಪ’ದ ಉದ್ದೇಶವಾಗಿದ್ದು. ವಿವಿಧ ರಾಜಕೀಯ ಚಿಂತನಾ ಧಾರೆಗಳ ಮುಕ್ತ ಸಮಾಗಮ ‘ದಿ ಪಾಲಿಟಿಕ್’ನ ಆಶಯವಾಗಿದೆ” ಎಂದು ಸಿದ್ದಪ್ಪ ಮೂಲಗೆ ಹೇಳಿದ್ದಾರೆ.

”ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರಾದ ಸಿ. ಎಸ್. ದ್ವಾರಕನಾಥ್, ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾಣೇಹಳ್ಳಿ, ರೈತಸಂಘದ ಮುಖಂಡ ನುಲೇನೂರು ಶಂಕರಪ್ಪ, ಸಾಹಿತಿ ಸಬಿತಾ ಬನ್ನಾಡಿ, ಪಿ. ಆರಡಿಮಲ್ಲಯ್ಯ ಕಟ್ಟೇರ, ಶಾರದ ಗೋಪಾಲ್, ಡಾ.ಶಿವಗಂಗಾ ರುಮ್ಮಾ, ಕನ್ನಡ ಚಿತ್ರನಟ ಚೇತನ್, ಡಾ.ಕೆ ಶರೀಫಾ, ಡಾ. ಪುರುಷೋತ್ತಮ ಬಿಳಿಮಲೆ, ಅರಳಿ ನಾಗರಾಜ್,  ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.

’’ದಿ ಪಾಲಿಟಿಕ್’’ ಕನ್ನಡ ವೆಬ್ ಜರ್ನಲ್‌ನ ಫೇಸ್‌ಬುಕ್ ಪೇಜ್‌ಗೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ‘ಮೂಕನಾಯಕ – 100’ : ತಮ್ಮ ಪತ್ರಿಕೆಗೆ ಬಾಬಾ ಸಾಹೇಬರು ಬರೆದ ಮೊದಲ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...