Homeಮುಖಪುಟಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಬಿಜೆಪಿ ಕುರಿತು ಟೀಕಾಪ್ರಹಾರ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್‌ಎಸ್‌ನಲ್ಲಿ ಹಲವಾರು ಏಕನಾಥ್ ಶಿಂಧೆಗಳು ಇದ್ದಾರೆ” ಎಂದಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್, “ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಏನಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್‌ಗೆ ಹೇಗೆ ಗೊತ್ತು? ಬಿಜೆಪಿಗೆ ಯಾವುದೇ ತಂತ್ರವಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ನೀವು. ಬಿಜೆಪಿಯ ಬಳಿ ಯಾವುದೇ ತಂತ್ರವಿಲ್ಲ ಎಂದಾದರೆ 18 ರಾಜ್ಯಗಳಲ್ಲಿ ಅಧಿಕಾರದಲ್ಲಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಬಳಸುತ್ತಿರುವ ಭಾಷೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕೆಸಿಆರ್ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನೀವು ದೇಶ್ ಕಿ ನೇತಾ (ದೇಶದ ನಾಯಕ) ಆಗಿದ್ದೀರಾ? ನೀವು ನಿಮ್ಮನ್ನು ಪ್ರಧಾನಿ ಮೋದಿಯೊಂದಿಗೆ ಹೋಲಿಸುತ್ತಿದ್ದೀರಿ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನೀವು ನಿಮ್ಮ ಫಾರ್ಮ್‌ಹೌಸ್‌ನಿಂದ ಹೊರಗೆ ಬರುವುದಿಲ್ಲ. ಎಲ್ಲರೂ ನಿಮ್ಮನ್ನು ನೋಡಿ ನಗುತ್ತಿದ್ದಾರೆ” ಎಂದು ಕರೀಂನಗರದ ಸಂಸದರೂ ಆಗಿರುವ ಬಂಡಿ ಸಂಜಯ್ ಟೀಕಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಕೆಸಿಆರ್ ಹೇಳಿಕೆಯನ್ನು ಉಲ್ಲೇಖಿಸಿದ ಬಂಡಿ ಸಂಜಯ್, “ನೀವು ಏಕನಾಥ್ ಶಿಂಧೆ ಬಗ್ಗೆ ಮಾತನಾಡುತ್ತಿದ್ದೀರಿ, ಮೊದಲು ನಿಮ್ಮ ಸ್ವಂತ ಪಕ್ಷವನ್ನು ನೋಡಿ. ಟಿಆರ್‌ಎಸ್‌ನಲ್ಲಿ ಅನೇಕ ಏಕನಾಥ್ ಶಿಂಧೆಗಳಿದ್ದಾರೆ ಎಂದು ನಾನು ಭಾವಿಸುತ್ತೇನೆ. ಏಕನಾಥ್ ಶಿಂಧೆಯಂತಹ ನಾಯಕರು ತಮ್ಮದೇ ಪಕ್ಷದಲ್ಲಿ ಬೆಳೆಯುತ್ತಿದ್ದಾರೆ ಎಂದು ಕೆಸಿಆರ್‌ ಭಯಪಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಪಕ್ಷದಲ್ಲಿ ಯಾರಾದರೂ ಏಕನಾಥ್ ಶಿಂಧೆ ಆಗಬಹುದು, ಅದು ಅವರ ಮಗ ಕೆಟಿಆರ್, ಮಗಳು (ಕೆ.ಕವಿತಾ), ಅಥವಾ ಸೋದರಳಿಯ (ಹರೀಶ್ ರಾವ್) ಆಗಬಹುದು” ಎಂದು ಭವಿಷ್ಯ ನುಡಿದಿದ್ದಾರೆ.

ಕೆಸಿಆರ್ ಅವರು ಭಾನುವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿದ ನಂತರ ಬಿಜೆಪಿ ಪ್ರತಿದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾವ್, “ನರೇಂದ್ರ ಮೋದಿ ಸರ್ಕಾರ ಹೋಗಬೇಕು, ಬಿಜೆಪಿಯೇತರ ಸರ್ಕಾರ ಬರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

“ಇಂದಿರಾ ಗಾಂಧಿ ಅವರಿಗೆ ಧನ್ಯವಾದಗಳು, ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರವಾಗಿ ಘೋಷಿಸಿದ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ” ಎಂದು ಕೆಸಿಆರ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಕುರಿತು ಮಾತನಾಡಿದ್ದ ಕೆಸಿಆರ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಡೆಯನ್ನು ಶ್ಲಾಘಿಸಿದ್ದರು.

“ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ ಅವರಿಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ” ಎಂದು ಕೆಸಿಆರ್‌ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...