Homeಮುಖಪುಟಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಬಿಜೆಪಿ ಕುರಿತು ಟೀಕಾಪ್ರಹಾರ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್‌ಎಸ್‌ನಲ್ಲಿ ಹಲವಾರು ಏಕನಾಥ್ ಶಿಂಧೆಗಳು ಇದ್ದಾರೆ” ಎಂದಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್, “ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಏನಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್‌ಗೆ ಹೇಗೆ ಗೊತ್ತು? ಬಿಜೆಪಿಗೆ ಯಾವುದೇ ತಂತ್ರವಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ನೀವು. ಬಿಜೆಪಿಯ ಬಳಿ ಯಾವುದೇ ತಂತ್ರವಿಲ್ಲ ಎಂದಾದರೆ 18 ರಾಜ್ಯಗಳಲ್ಲಿ ಅಧಿಕಾರದಲ್ಲಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಬಳಸುತ್ತಿರುವ ಭಾಷೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕೆಸಿಆರ್ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನೀವು ದೇಶ್ ಕಿ ನೇತಾ (ದೇಶದ ನಾಯಕ) ಆಗಿದ್ದೀರಾ? ನೀವು ನಿಮ್ಮನ್ನು ಪ್ರಧಾನಿ ಮೋದಿಯೊಂದಿಗೆ ಹೋಲಿಸುತ್ತಿದ್ದೀರಿ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನೀವು ನಿಮ್ಮ ಫಾರ್ಮ್‌ಹೌಸ್‌ನಿಂದ ಹೊರಗೆ ಬರುವುದಿಲ್ಲ. ಎಲ್ಲರೂ ನಿಮ್ಮನ್ನು ನೋಡಿ ನಗುತ್ತಿದ್ದಾರೆ” ಎಂದು ಕರೀಂನಗರದ ಸಂಸದರೂ ಆಗಿರುವ ಬಂಡಿ ಸಂಜಯ್ ಟೀಕಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಕೆಸಿಆರ್ ಹೇಳಿಕೆಯನ್ನು ಉಲ್ಲೇಖಿಸಿದ ಬಂಡಿ ಸಂಜಯ್, “ನೀವು ಏಕನಾಥ್ ಶಿಂಧೆ ಬಗ್ಗೆ ಮಾತನಾಡುತ್ತಿದ್ದೀರಿ, ಮೊದಲು ನಿಮ್ಮ ಸ್ವಂತ ಪಕ್ಷವನ್ನು ನೋಡಿ. ಟಿಆರ್‌ಎಸ್‌ನಲ್ಲಿ ಅನೇಕ ಏಕನಾಥ್ ಶಿಂಧೆಗಳಿದ್ದಾರೆ ಎಂದು ನಾನು ಭಾವಿಸುತ್ತೇನೆ. ಏಕನಾಥ್ ಶಿಂಧೆಯಂತಹ ನಾಯಕರು ತಮ್ಮದೇ ಪಕ್ಷದಲ್ಲಿ ಬೆಳೆಯುತ್ತಿದ್ದಾರೆ ಎಂದು ಕೆಸಿಆರ್‌ ಭಯಪಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಪಕ್ಷದಲ್ಲಿ ಯಾರಾದರೂ ಏಕನಾಥ್ ಶಿಂಧೆ ಆಗಬಹುದು, ಅದು ಅವರ ಮಗ ಕೆಟಿಆರ್, ಮಗಳು (ಕೆ.ಕವಿತಾ), ಅಥವಾ ಸೋದರಳಿಯ (ಹರೀಶ್ ರಾವ್) ಆಗಬಹುದು” ಎಂದು ಭವಿಷ್ಯ ನುಡಿದಿದ್ದಾರೆ.

ಕೆಸಿಆರ್ ಅವರು ಭಾನುವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿದ ನಂತರ ಬಿಜೆಪಿ ಪ್ರತಿದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾವ್, “ನರೇಂದ್ರ ಮೋದಿ ಸರ್ಕಾರ ಹೋಗಬೇಕು, ಬಿಜೆಪಿಯೇತರ ಸರ್ಕಾರ ಬರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

“ಇಂದಿರಾ ಗಾಂಧಿ ಅವರಿಗೆ ಧನ್ಯವಾದಗಳು, ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರವಾಗಿ ಘೋಷಿಸಿದ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ” ಎಂದು ಕೆಸಿಆರ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಕುರಿತು ಮಾತನಾಡಿದ್ದ ಕೆಸಿಆರ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಡೆಯನ್ನು ಶ್ಲಾಘಿಸಿದ್ದರು.

“ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ ಅವರಿಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ” ಎಂದು ಕೆಸಿಆರ್‌ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....