Homeಮುಖಪುಟಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಬಿಜೆಪಿ ಕುರಿತು ಟೀಕಾಪ್ರಹಾರ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್‌ಎಸ್‌ನಲ್ಲಿ ಹಲವಾರು ಏಕನಾಥ್ ಶಿಂಧೆಗಳು ಇದ್ದಾರೆ” ಎಂದಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್, “ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಏನಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್‌ಗೆ ಹೇಗೆ ಗೊತ್ತು? ಬಿಜೆಪಿಗೆ ಯಾವುದೇ ತಂತ್ರವಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ನೀವು. ಬಿಜೆಪಿಯ ಬಳಿ ಯಾವುದೇ ತಂತ್ರವಿಲ್ಲ ಎಂದಾದರೆ 18 ರಾಜ್ಯಗಳಲ್ಲಿ ಅಧಿಕಾರದಲ್ಲಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಬಳಸುತ್ತಿರುವ ಭಾಷೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕೆಸಿಆರ್ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನೀವು ದೇಶ್ ಕಿ ನೇತಾ (ದೇಶದ ನಾಯಕ) ಆಗಿದ್ದೀರಾ? ನೀವು ನಿಮ್ಮನ್ನು ಪ್ರಧಾನಿ ಮೋದಿಯೊಂದಿಗೆ ಹೋಲಿಸುತ್ತಿದ್ದೀರಿ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನೀವು ನಿಮ್ಮ ಫಾರ್ಮ್‌ಹೌಸ್‌ನಿಂದ ಹೊರಗೆ ಬರುವುದಿಲ್ಲ. ಎಲ್ಲರೂ ನಿಮ್ಮನ್ನು ನೋಡಿ ನಗುತ್ತಿದ್ದಾರೆ” ಎಂದು ಕರೀಂನಗರದ ಸಂಸದರೂ ಆಗಿರುವ ಬಂಡಿ ಸಂಜಯ್ ಟೀಕಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಕೆಸಿಆರ್ ಹೇಳಿಕೆಯನ್ನು ಉಲ್ಲೇಖಿಸಿದ ಬಂಡಿ ಸಂಜಯ್, “ನೀವು ಏಕನಾಥ್ ಶಿಂಧೆ ಬಗ್ಗೆ ಮಾತನಾಡುತ್ತಿದ್ದೀರಿ, ಮೊದಲು ನಿಮ್ಮ ಸ್ವಂತ ಪಕ್ಷವನ್ನು ನೋಡಿ. ಟಿಆರ್‌ಎಸ್‌ನಲ್ಲಿ ಅನೇಕ ಏಕನಾಥ್ ಶಿಂಧೆಗಳಿದ್ದಾರೆ ಎಂದು ನಾನು ಭಾವಿಸುತ್ತೇನೆ. ಏಕನಾಥ್ ಶಿಂಧೆಯಂತಹ ನಾಯಕರು ತಮ್ಮದೇ ಪಕ್ಷದಲ್ಲಿ ಬೆಳೆಯುತ್ತಿದ್ದಾರೆ ಎಂದು ಕೆಸಿಆರ್‌ ಭಯಪಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಪಕ್ಷದಲ್ಲಿ ಯಾರಾದರೂ ಏಕನಾಥ್ ಶಿಂಧೆ ಆಗಬಹುದು, ಅದು ಅವರ ಮಗ ಕೆಟಿಆರ್, ಮಗಳು (ಕೆ.ಕವಿತಾ), ಅಥವಾ ಸೋದರಳಿಯ (ಹರೀಶ್ ರಾವ್) ಆಗಬಹುದು” ಎಂದು ಭವಿಷ್ಯ ನುಡಿದಿದ್ದಾರೆ.

ಕೆಸಿಆರ್ ಅವರು ಭಾನುವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿದ ನಂತರ ಬಿಜೆಪಿ ಪ್ರತಿದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾವ್, “ನರೇಂದ್ರ ಮೋದಿ ಸರ್ಕಾರ ಹೋಗಬೇಕು, ಬಿಜೆಪಿಯೇತರ ಸರ್ಕಾರ ಬರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

“ಇಂದಿರಾ ಗಾಂಧಿ ಅವರಿಗೆ ಧನ್ಯವಾದಗಳು, ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರವಾಗಿ ಘೋಷಿಸಿದ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ” ಎಂದು ಕೆಸಿಆರ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಕುರಿತು ಮಾತನಾಡಿದ್ದ ಕೆಸಿಆರ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಡೆಯನ್ನು ಶ್ಲಾಘಿಸಿದ್ದರು.

“ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ ಅವರಿಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ” ಎಂದು ಕೆಸಿಆರ್‌ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...