Homeಮುಖಪುಟಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

ಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

- Advertisement -
- Advertisement -

ಬಿಜೆಪಿಯು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ, ಜನರು ಶೀಘ್ರದಲ್ಲೇ ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರಗಳನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ಭಾನುವಾರ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಜುಲೈ 27ರಂದು ಅಲಹಾಬಾದ್ ಹೈಕೋರ್ಟ್ ವಾರಣಾಸಿಯ ಆಗಸ್ಟ್ 3 ರವರೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿಯೇ ಮೌರ್ಯ ಅವರ ಈ ಹೇಳಿಕೆಗಳು ಬಂದಿವೆ.

ಮಸೀದಿಯೊಳಗೆ ಸಮೀಕ್ಷೆ ನಡೆಸುವುದಾದರೆ ಹಿಂದೂ ದೇವಾಲಯದ ಮೊದಲು ಏನಿದೆ ಎಂಬುದನ್ನು ಸಹ ಸಮೀಕ್ಷೆ ಮಾಡಬೇಕು ಎಂದು ಮೌರ್ಯ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

”ಈಗಿನ ಹೆಚ್ಚಿನ ಹಿಂದೂ ದೇವಾಲಯಗಳು ಮಠಗಳು ಅಥವಾ ಕಲಿಕಾ ಕೇಂದ್ರಗಳು ಈ ಹಿಂದೆ ಬೌದ್ಧ ಧಾರ್ಮಿಕ ಸ್ಥಳಗಳಾಗಿದ್ದವು ಎಂದು ನಾನು ನಂಬುತ್ತೇನೆ. ಅವುಗಳನ್ನು ಕೆಡವಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ” ಎಂದು ಮೌರ್ಯ ಹೇಳಿದರು.

ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಏಳನೇ ಶತಮಾನ ಮತ್ತು ಎಂಟನೇ ಶತಮಾನದ ನಡುವೆ ಬೌದ್ಧ ವಿಹಾರಗಳಾಗಿದ್ದವು ಎಂದು ತೋರಿಸಲು ಪುರಾವೆಗಳಿವೆ. ಆದಾಗ್ಯೂ, ಹಿಂದೂ ವಿದ್ವಾಂಸ ಶಂಕರಾಚಾರ್ಯರು ಅವುಗಳನ್ನು ಹಿಂದೂ ದೇವಾಲಯಗಳಾಗಿ ಪರಿವರ್ತಿಸಿದರು ಎಂದು ಮೌರ್ಯ ಪ್ರತಿಪಾದಿಸಿದರು.

ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿ ಈ ಪುರಿಯ ಜಗನ್ನಾಥ ದೇವಾಲಯ, ಶಬರಿಮಲೆಯ ಅಯ್ಯಪ್ಪ ದೇವಾಲಯ ಮತ್ತು ಪಂಢರಪುರದ ವಿಠ್ಠಲ ದೇವಾಲಯಗಳು ಹಿಂದೂ ಧಾರ್ಮಿಕ ಮಂದಿರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಚಿವರ ಹೇಳಿಕೆಯಿಂದ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಟೀಕೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೌರ್ಯ, ”ನಿಮ್ಮ ನಂಬಿಕೆ ನಿಮಗೆ ಮುಖ್ಯವಾದರೆ ಅವುಗಳನ್ನು ಅನುಸರಿಸುವವರಿಗೂ ನಂಬಿಕೆಗಳು ಮುಖ್ಯ. ನೀವು ನಿಮ್ಮ ಧರ್ಮದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ನೀವು ಇತರ ಧರ್ಮಗಳ ಬಗ್ಗೆಯೂ ಪರಿಗಣಿಸಬೇಕು” ಎಂದು ಮೌರ್ಯ ಹೇಳಿದ್ದಾರೆ.

”ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ಅವರ ಉದ್ದೇಶವಲ್ಲ, ಆದರೆ ಮಸೀದಿಗಳಲ್ಲಿ ದೇವಾಲಯಗಳನ್ನು ಹುಡಕಬೇಡಿ ಎಂದು ಹೇಳುವುದು ನನ್ನ ಉದ್ದೇಶವಾಗಿದೆ” ಎಂದು ಮೌರ್ಯ ಹೇಳಿದರು.

”ದೇವಾಲಯಗಳ ಮೇಲೆ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಸಾಕಷ್ಟು ಪುರಾವೆಗಳಿಲ್ಲದಿರಬಹುದು, ಆದರೆ ಬೌದ್ಧ ವಿಹಾರಗಳ ಮೇಲೆ ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ತೋರಿಸಲು ಸಾಕಷ್ಟು ಪುರಾವೆಗಳಿವೆ” ಎಂದು ಅವರು ಹೇಳಿದರು.

ಮೌರ್ಯ ಅವರ ಹೇಳಿಕೆಗಳು ಹೊಸ ವಿವಾದಗಳಿಗೆ ಕಾರಣವಾಗಬಹುದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ.

”ಮೌರ್ಯ ಅವರು ಬಿಜೆಪಿ ಸರ್ಕಾರದಲ್ಲಿ ಸುದೀರ್ಘ ಕಾಲ ಸಚಿವರಾಗಿದ್ದಾಗ, ಈ ವಿಷಯದಲ್ಲಿ ಪಕ್ಷ ಮತ್ತು ಸರ್ಕಾರದ ಮೇಲೆ ಏಕೆ ಅಂತಹ ಒತ್ತಡ ಹೇರಲಿಲ್ಲ. ಈಗ ಚುನಾವಣೆಯ ಸಮಯದಲ್ಲಿ ಇಂತಹ ಧಾರ್ಮಿಕ ವಿವಾದವನ್ನು ಸೃಷ್ಟಿಸುವುದು ಅವರ ಮತ್ತು ಸಮಾಜವಾದಿ ಪಕ್ಷದ ಅಸಹ್ಯಕರ ರಾಜಕೀಯವಾಗಿದೆ. ಬೌದ್ಧ ಮತ್ತು ಮುಸ್ಲಿಂ ಸಮಾಜಗಳು ಅವರಿಂದ ದಾರಿ ತಪ್ಪುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಸಿಂಗ್ ಚೌಧರಿ ಅವರು, ”ಮೌರ್ಯ ಅವರ ಹೇಳಿಕೆಗಳು ಹಿಂದೂ ಧರ್ಮವನ್ನು ಅವಮಾನಿಸುತ್ತಿವೆ ಮತ್ತು ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

”ಈ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಬೇಕು ಮತ್ತು ಸಮಾಜವಾದಿ ಪಕ್ಷವು ಅದನ್ನು ಒಪ್ಪುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...