Homeಮುಖಪುಟಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

ಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

- Advertisement -
- Advertisement -

ಬಿಜೆಪಿಯು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ, ಜನರು ಶೀಘ್ರದಲ್ಲೇ ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರಗಳನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ಭಾನುವಾರ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಜುಲೈ 27ರಂದು ಅಲಹಾಬಾದ್ ಹೈಕೋರ್ಟ್ ವಾರಣಾಸಿಯ ಆಗಸ್ಟ್ 3 ರವರೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿಯೇ ಮೌರ್ಯ ಅವರ ಈ ಹೇಳಿಕೆಗಳು ಬಂದಿವೆ.

ಮಸೀದಿಯೊಳಗೆ ಸಮೀಕ್ಷೆ ನಡೆಸುವುದಾದರೆ ಹಿಂದೂ ದೇವಾಲಯದ ಮೊದಲು ಏನಿದೆ ಎಂಬುದನ್ನು ಸಹ ಸಮೀಕ್ಷೆ ಮಾಡಬೇಕು ಎಂದು ಮೌರ್ಯ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

”ಈಗಿನ ಹೆಚ್ಚಿನ ಹಿಂದೂ ದೇವಾಲಯಗಳು ಮಠಗಳು ಅಥವಾ ಕಲಿಕಾ ಕೇಂದ್ರಗಳು ಈ ಹಿಂದೆ ಬೌದ್ಧ ಧಾರ್ಮಿಕ ಸ್ಥಳಗಳಾಗಿದ್ದವು ಎಂದು ನಾನು ನಂಬುತ್ತೇನೆ. ಅವುಗಳನ್ನು ಕೆಡವಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ” ಎಂದು ಮೌರ್ಯ ಹೇಳಿದರು.

ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಏಳನೇ ಶತಮಾನ ಮತ್ತು ಎಂಟನೇ ಶತಮಾನದ ನಡುವೆ ಬೌದ್ಧ ವಿಹಾರಗಳಾಗಿದ್ದವು ಎಂದು ತೋರಿಸಲು ಪುರಾವೆಗಳಿವೆ. ಆದಾಗ್ಯೂ, ಹಿಂದೂ ವಿದ್ವಾಂಸ ಶಂಕರಾಚಾರ್ಯರು ಅವುಗಳನ್ನು ಹಿಂದೂ ದೇವಾಲಯಗಳಾಗಿ ಪರಿವರ್ತಿಸಿದರು ಎಂದು ಮೌರ್ಯ ಪ್ರತಿಪಾದಿಸಿದರು.

ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿ ಈ ಪುರಿಯ ಜಗನ್ನಾಥ ದೇವಾಲಯ, ಶಬರಿಮಲೆಯ ಅಯ್ಯಪ್ಪ ದೇವಾಲಯ ಮತ್ತು ಪಂಢರಪುರದ ವಿಠ್ಠಲ ದೇವಾಲಯಗಳು ಹಿಂದೂ ಧಾರ್ಮಿಕ ಮಂದಿರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಚಿವರ ಹೇಳಿಕೆಯಿಂದ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಟೀಕೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೌರ್ಯ, ”ನಿಮ್ಮ ನಂಬಿಕೆ ನಿಮಗೆ ಮುಖ್ಯವಾದರೆ ಅವುಗಳನ್ನು ಅನುಸರಿಸುವವರಿಗೂ ನಂಬಿಕೆಗಳು ಮುಖ್ಯ. ನೀವು ನಿಮ್ಮ ಧರ್ಮದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ನೀವು ಇತರ ಧರ್ಮಗಳ ಬಗ್ಗೆಯೂ ಪರಿಗಣಿಸಬೇಕು” ಎಂದು ಮೌರ್ಯ ಹೇಳಿದ್ದಾರೆ.

”ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ಅವರ ಉದ್ದೇಶವಲ್ಲ, ಆದರೆ ಮಸೀದಿಗಳಲ್ಲಿ ದೇವಾಲಯಗಳನ್ನು ಹುಡಕಬೇಡಿ ಎಂದು ಹೇಳುವುದು ನನ್ನ ಉದ್ದೇಶವಾಗಿದೆ” ಎಂದು ಮೌರ್ಯ ಹೇಳಿದರು.

”ದೇವಾಲಯಗಳ ಮೇಲೆ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಸಾಕಷ್ಟು ಪುರಾವೆಗಳಿಲ್ಲದಿರಬಹುದು, ಆದರೆ ಬೌದ್ಧ ವಿಹಾರಗಳ ಮೇಲೆ ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ತೋರಿಸಲು ಸಾಕಷ್ಟು ಪುರಾವೆಗಳಿವೆ” ಎಂದು ಅವರು ಹೇಳಿದರು.

ಮೌರ್ಯ ಅವರ ಹೇಳಿಕೆಗಳು ಹೊಸ ವಿವಾದಗಳಿಗೆ ಕಾರಣವಾಗಬಹುದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ.

”ಮೌರ್ಯ ಅವರು ಬಿಜೆಪಿ ಸರ್ಕಾರದಲ್ಲಿ ಸುದೀರ್ಘ ಕಾಲ ಸಚಿವರಾಗಿದ್ದಾಗ, ಈ ವಿಷಯದಲ್ಲಿ ಪಕ್ಷ ಮತ್ತು ಸರ್ಕಾರದ ಮೇಲೆ ಏಕೆ ಅಂತಹ ಒತ್ತಡ ಹೇರಲಿಲ್ಲ. ಈಗ ಚುನಾವಣೆಯ ಸಮಯದಲ್ಲಿ ಇಂತಹ ಧಾರ್ಮಿಕ ವಿವಾದವನ್ನು ಸೃಷ್ಟಿಸುವುದು ಅವರ ಮತ್ತು ಸಮಾಜವಾದಿ ಪಕ್ಷದ ಅಸಹ್ಯಕರ ರಾಜಕೀಯವಾಗಿದೆ. ಬೌದ್ಧ ಮತ್ತು ಮುಸ್ಲಿಂ ಸಮಾಜಗಳು ಅವರಿಂದ ದಾರಿ ತಪ್ಪುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಸಿಂಗ್ ಚೌಧರಿ ಅವರು, ”ಮೌರ್ಯ ಅವರ ಹೇಳಿಕೆಗಳು ಹಿಂದೂ ಧರ್ಮವನ್ನು ಅವಮಾನಿಸುತ್ತಿವೆ ಮತ್ತು ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

”ಈ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಬೇಕು ಮತ್ತು ಸಮಾಜವಾದಿ ಪಕ್ಷವು ಅದನ್ನು ಒಪ್ಪುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...