HomeಮುಖಪುಟINDIA ಮೈತ್ರಿಕೂಟ ತೊರೆದ ನಿತೀಶ್‌ ಕುಮಾರ್‌: ಖರ್ಗೆ ಪ್ರತಿಕ್ರಿಯೆ....

INDIA ಮೈತ್ರಿಕೂಟ ತೊರೆದ ನಿತೀಶ್‌ ಕುಮಾರ್‌: ಖರ್ಗೆ ಪ್ರತಿಕ್ರಿಯೆ….

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ನನಗೆ ತಿಳಿದಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಹೇಳಿದ್ದಾರೆ.

ಮೊದಲು ಅವರು ಮತ್ತು ನಾವು ಒಟ್ಟಿಗೆ ಹೋರಾಡುತ್ತಿದ್ದೆವು, ನಾನು ಲಾಲು ಜಿ ಮತ್ತು ತೇಜಸ್ವಿ ಅವರೊಂದಿಗೆ ಮಾತನಾಡುವಾಗ, ಅವರು ನಿತೀಶ್ ಹೋಗುತ್ತಿದ್ದಾರೆ ಎಂದು ಹೇಳಿದರು, ಅವರು ಉಳಿಯಲು ಬಯಸಿದ್ದರೆ ಅವರು ಉಳಿಯುತ್ತಿದ್ದರು ಆದರೆ ಅವರು ಹೋಗಬೇಕೆಂದು ಬಯಸುತ್ತಾರೆ. ಈ ಮಾಹಿತಿಯನ್ನು ಈಗಾಗಲೇ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ನಮಗೆ ನೀಡಿದ್ದಾರೆ. ಇಂದು ಅದು ನಿಜವಾಯಿತು. ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಸಿಎಂ ನಿತೀಶ್‌ ಕುಮಾರ್‌ INDIA ಮೈತ್ರಿಕೂಟದ ನಾಯಕರಲ್ಲಿ ಮುಂಚೂಣಿಯಲ್ಲಿದ್ದರು. ಅವರನ್ನು ಮೈತ್ರಿ ಬಣದ ಸಂಚಾಲಕರನ್ನಾಗಿ ನೇಮಿಸಲಾಗಿತ್ತು. ಇದಲ್ಲದೆ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು. ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಹುದ್ದೆಗೆ ಪ್ರಸ್ತಾಪಿಸಿದಾಗ ನಿತೀಶ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಪ್ರಾರಂಭದಲ್ಲಿ ತಮ್ಮ ಪ್ರಯತ್ನಕ್ಕೆ ಅವರು ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿಯ ಜೊತೆ ಭಿನ್ನಾಭಿಪ್ರಾಯಗಳನ್ನು ಎದುರಿಸಿದ್ದರು.

ನಿತೀಶ್ ಕುಮಾರ್ ಬಿಹಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಲ್ಲವೂ ಸರಿಯಿಲ್ಲ ಎಂದು ಹೇಳುವ ಮೂಲಕ ಮಹಾಘಟಬಂಧನ್‌ನ್ನು ಕೊನೆಗೊಳಿಸಿದ್ದಾರೆ. ನಿತೀಶ್‌ ಕುಮಾರ್‌ ತಮ್ಮ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ನಂತರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾಮೈತ್ರಿಕೂಟಕ್ಕೆ ಧಕ್ಕೆ ಉಂಟಾಗಿದೆ. ಈಗಾಗಲೇ ಪ.ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದು, INDIA  ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿದೆ. ಸೀಟು ಹಂಚಿಕೆ ಬಿಕ್ಕಟ್ಟು, ಮೈತ್ರಿಯಲ್ಲಿ ನಿರುತ್ಸಾಹ, ಪ್ರಧಾನಿ ಅಭ್ಯರ್ಥಿ ಕುರಿತು ಒಮ್ಮತವಿಲ್ಲದಿರುವುದು ಸೇರಿದಂತೆ ಹಲವು ವಿಚಾರಗಳು INDIA  ಮೈತ್ರಿಕೂಟದಲ್ಲಿ ಬಿರುಕಿಗೆ ಕಾರಣವಾಗಿದೆ.

ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಜೆಪಿ ಭಾನುವಾರ ಅಂಗೀಕರಿಸಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ಜನರ ಕಲ್ಯಾಣಕ್ಕಾಗಿ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾವನೆಯನ್ನು ಎಲ್ಲಾ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.

ಸಭೆಯಲ್ಲಿ ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ನಿತೀಶ್ ಕುಮಾರ್ ಅವರ ನೂತನ ಎನ್‌ಡಿಎ ಸರಕಾರದಲ್ಲಿ ಬಿಜೆಪಿಯಿಂದ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಡಿಸಿಎಂಗಳಾಗಿ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.

ಇದನ್ನು ಓದಿ: ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...