Homeಮುಖಪುಟಎಲ್ಲರ ಹಸಿವು ನೀಗಿಸಲು ನಮ್ಮ ಮುಂದಿವೆ ಹಲವು ದೇಶಗಳ ಮಾದರಿಗಳು

ಎಲ್ಲರ ಹಸಿವು ನೀಗಿಸಲು ನಮ್ಮ ಮುಂದಿವೆ ಹಲವು ದೇಶಗಳ ಮಾದರಿಗಳು

ಇಂಡೋನೇಷಿಯಾದಲ್ಲಿ ಹಾಲನ್ನು ನೀರಿನ ತರಾ ನಲ್ಲಿಯಲ್ಲಿ ಅವರವರ ಅಡಗಿ ಮನಿಯೊಳಗ ಕಳಿಸಿಕೊಡತಾರ. ಶ್ರೀಲಂಕಾ - ಬಾಂಗ್ಲಾದೇಶದಲ್ಲಿ ಸಹಿತ ಊಟದ ಬುಟ್ಟಿ ಕೊಡತಾರ. ಪಾಕಿಸ್ತಾನ ದಂತಾ ಪಾಕಿಸ್ತಾನದಾಗ ಹಿಟ್ಟು- ಎಣ್ಣಿ, ಪ್ಯಾಂಟು- ಷರ್ಟಿನ ಅರಿವಿ- ಬೂಟು, ಕೊಡತಾರು.

- Advertisement -
- Advertisement -

ಎಂಬತ್ತರ ದಶಕದಲ್ಲಿ ದ್ವಾರಕೀಶ ಅವರು ʻಎಲ್ಲಿದೆಯೋ ನ್ಯಾಯಾ, ಅಣ್ಣಾ, ಎಲ್ಲಿದೆಯೋ ನ್ಯಾಯಾʼ ಅಂತ ಹಾಡಿದರು. ಆ ಹಾಡು ಬರೆದ ಚಿರಂತನ ಕವಿ ಚಿ.ಉದಯಶಂಕರ ಅವರು ʻಬಡವನು ನ್ಯಾಯವ ಕೇಳುವುದೇ ಅನ್ಯಾಯʼ ಅನ್ನುವ ಅಂತಿಮ ಸತ್ಯವೊಂದನ್ನು ದ್ವಾರಕೀಶ ಅವರ ಬಾಯಿಯಲ್ಲಿ ಹೇಳಿಸಿದರು.

ಆ ಹಾಡು ಈಗ ನೆನಪಾಗಲಿಕ್ಕೆ ಕಾರಣ ಏನಂದರ ನಾವು ನಮ್ಮ ದೇಶದ ಲಕ್ಷಾಂತರ ಕಾರ್ಮಿಕರನ್ನು ಸಾವಿರಾರು ಕಿಲೊಮಿಟರ್ ನಡಕೊಂಡು ಹೋಗಲಿಕ್ಕೆ ಬಿಟ್ಟು ಮನಿಯೊಳಗ ನೆಟ್ ಫ್ಲಿಕ್ಸ ನೋಡಾಕ ಹತ್ತೇವಿ.

ಅವರು ನಮ್ಮನ್ನ ನ್ಯಾಯ ಎಲ್ಲಿದೆ ಅಂತ ಕೇಳಾಕ ಒಲ್ಲರು, ಹಂಗ ಏನರ ಕೇಳಿದರ ಅದಕ್ಕ ಉತ್ತರ ಕೊಡಾಕ ನಮ್ಮ ಕಡೆ ಆಗವಲ್ಲದು. ಅವರ ಸಂಕಟಕ್ಕ ಮರುಗೋದು ಬಿಟ್ಟು, ನಾವು “ಅವರು ಯಾಕ ತಮ್ಮ ರಾಜ್ಯ ಬಿಟ್ಟು ಇಲ್ಲಿಗೆ ಬರಾಕ ಹೋದರು?”, “ಅವರ ರಾಜ್ಯದ ಸರಕಾರಗಳು ಅವರಿಗೆ ಕೆಲಸ ಕೊಡಲಿಕ್ಕೆ ಯಾಕ ಆಗಲಿಲ್ಲ?”, ಇಲ್ಲಿಗೆ ಬಂದು ಐದು- ಹತ್ತು ಸಾವಿರ ರುಪಾಯಿ ಗಳಿಸೋರು ಅವರು, ಅವರಿಗೆ ಅಷ್ಟೂ ಕೊಡಾಕ ಆಗಲಿಲ್ಲೇನು ಅಲ್ಲಿನ ಸರಕಾರದವರಿಗೆ ಅಂತ ಪಾಟಿ ಸವಾಲು ಮಾಡಾಕ ಹತ್ತೇವಿ.

ʻಹಂಗಾರ ಅವರಿಗೆ ಅನ್ಯಾಯ ಆಗೇತೋ ಇಲ್ಲವೋ?ʼ ಅಂತ ಕೇಳಿದರೆ. ʻಹೌದುʼ ಅಂತ ನಾಚಿಕೋತನ ಹೇಳತೇವಿ. ಹಂಗಾರ ಈ ಅನ್ಯಾಯ ಆಗಲಾರದಂಗ ಏನು ಮಾಡಬಹುದಿತ್ತು ಅಂತ ಕೇಳಿದರ ಯಾರ ಹತ್ತರನೂ ಉತ್ತರ ಇಲ್ಲ.

ಆ ಉತ್ತರದ ಸಾಧ್ಯತೆಗಳನ್ನ ಇಲ್ಲಿ ನೋಡೋಣ.

ಮೊದಲನೆಯದು ʻಅನ್ನ ಭಾಗ್ಯʼ ಅನ್ನೋ ಹೆಸರಿನ ಯೋಜನೆ. ಆ ಹೆಸರಿನ ಬದಲಿಗೆ ʻಹಕ್ಕಿನ ಅನ್ನʼ ಅಂತ ಇಡಬಹುದಾಗಿತ್ತು. ಇದು ಕೇಂದ್ರ ಕೊಡುವ ಸಬ್ಸಿಡಿ ಜೊತೆಗೆ ರಾಜ್ಯದ ಸಬ್ಸಿಡಿಯನ್ನೂ ಸೇರಿಸಿ ಬಡವರಿಗೆ ಅಕ್ಕಿ-ಗೋಧಿ ಕೊಡುವ ಯೋಜನೆ. ಇದು ಪರ-ವಿರೋಧ ದನಿಗಳನ್ನು ಎಬ್ಬಿಸಿತು. ಇದು ಕಷ್ಟಪಟ್ಟ ದುಡಿಯುವವರ ಕೈಯಿಂದ ಹಣ ಕಸಿದು ಬಡವರಿಗೆ ತಿನ್ನಿಸಿ ಅವರನ್ನು ಆಲಸಿಯಾಗಿಸಿತು ಅಂತ ಕೆಲವರು ಭೀಕರವಾಗಿ ವಿರೋಧಿಸಿದರು. ಇನ್ನು ಕೆಲವರು ಬಡವರ ಕಷ್ಟಕಾಲಕ್ಕೆ ಆಯಿತು ಅಂತ ಸ್ವಾಗತಿಸಿದರು.

ʻಇದು ಅಪೂರ್ಣವಾಯಿತು, ಇದನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ರೂಪಿಸಬಹುದಿತ್ತು. ಇದರಲ್ಲಿನ ಬ್ರಷ್ಟಾಚಾರದ ಅವಕಾಶಗಳನ್ನು ಕಮ್ಮಿ ಮಾಡಬೇಕಾಗಿತ್ತುʼ ಅಂತ ಇನ್ನು ಕೆಲವರು ಸೃಜನಾತ್ಮಕ ಟೀಕೆ ಮಾಡಿದರು, ಸಲಹೆ ನೀಡಿದರು.

ಇಂಥದ್ದರಲ್ಲಿ ಒಂದು ಒಳ್ಳೆಯ ಐಡಿಯಾ ಅಂದರೆ ಫುಡ್ ಬಾಸ್ಕೆಟ್ ಅಥವಾ ʻಊಟದ ಬುಟ್ಟಿʼ. ಹಿಂಗಂದರ, ಬರೇ ಅಕ್ಕಿ, ಗೋಧಿ, ಕೊಡೋದಲ್ಲ, ಕಾಳು-ಬೇಳೆ- ಎಣ್ಣೆ- ಹಾಲಿನ ಪದಾರ್ಥ, ಸಕ್ಕರೆ- ಉಪ್ಪು- ಮಸಾಲೆ ಸಾಮಾನು, – ಸೋಪು, ಹಣ್ಣು- ತರಕಾರಿ ಸಹಿತ ಸೇರಿಸಿ ಬಡವರಿಗೆ ಕೊಡೋದು. ಕೆಲವು ದೇಶಗಳಲ್ಲಂತೂ ಇದನ್ನು ಎಲ್ಲರಿಗೂ ಕೊಡತಾರ. ಬ್ಯಾಡಾ ಅಂದವರು ಬಿಡಬಹುದು. ಗ್ಯಾಸಿನ ಸಬ್ಸಿಡಿ ಇದ್ದಂಗ.

ಇದು ಐವತ್ತು ವರ್ಷಗಳಿಂದ ಕ್ಯೂಬಾ ದೇಶದಲ್ಲಿ ನಡೆದುಕೊಂಡು ಬಂದದ. ಭಾರತಕ್ಕಿಂತ ಕಮ್ಮಿ ತಲಾ ಆದಾಯ ಇರುವ ದೇಶಗಳಲ್ಲಿ ಸಹಿತ ಇಂತಹ ಅನೇಕ ಯೋಜನೆಗಳು ಯಶಸ್ವಿಯಾಗಿ ನಡೆದುಕೊಂಡು ಬಂದಾವು.

ಅದರಲ್ಲಿ ಕೆಲವು ನೋಡೋಣ. ಇಂಡೋನೇಷಿಯಾದಲ್ಲಿ ಹಾಲನ್ನು ನೀರಿನ ತರಾ ನಲ್ಲಿಯಲ್ಲಿ ಅವರವರ ಅಡಗಿ ಮನಿಯೊಳಗ ಕಳಿಸಿಕೊಡತಾರ. ಶ್ರೀಲಂಕಾ – ಬಾಂಗ್ಲಾದೇಶದಲ್ಲಿ ಸಹಿತ ಊಟದ ಬುಟ್ಟಿ ಕೊಡತಾರ. ಪಾಕಿಸ್ತಾನ ದಂತಾ ಪಾಕಿಸ್ತಾನದಾಗ ಹಿಟ್ಟು- ಎಣ್ಣಿ, ಪ್ಯಾಂಟು- ಷರ್ಟಿನ ಅರಿವಿ- ಬೂಟು, ಕೊಡತಾರು.

ಕ್ಯೂಬಾದಾಗ ಎಲ್ಲಾರಿಗೂ ಕೊಡತಾರ. ಆದರ ಬ್ಯಾರೆ ದೇಶಗಳೊಳಗ ಬಡವರಿಗಷ್ಟ ಕೊಡತಾರ.

ನಾವು ಯಾಕ ಕೊಡಲಿಕ್ಕೆ ಆಗಲೊಲ್ಲದು?

ಯಾಕಂದರ ಕೇಂದ್ರ ನಮಗ ರೊಕ್ಕ ಕೊಡೋದಿಲ್ಲ, ಅಕ್ಕಿ ಕೊಡತೇತಿ. ಪ್ರತಿ ತಿಂಗಳ, ಪ್ರತಿ ಮನುಷಾನ ಲೆಕ್ಕದಲೆ, 27 ರೂಪಾಯಿ ಕೊಡತೆತಿ. ಅದನ್ನ ಒಂದು ಕೇಜಿ ಅಕ್ಕಿಯ ರೂಪದಾಗ ಕೊಡತೇತಿ. ಅದ ರೊಕ್ಕ ನಮಗ ಕೊಟ್ಟರ ನಾವು ಏನಾದರೂ ತೊಗೋಬಹುದು.

ಕರ್ನಾಟಕದಾಗ ಸರಬರಾಜು ಆಗೋ ಅಕ್ಕಿ ಛತ್ತೀಸಘಡ, ಜಾರಖಂಡಿನಿಂದ ಬರತೇತಿ. ಗೋಧಿ ಪಂಜಾಬು- ಹರಿಯಾಣಾ- ಮಹಾರಾಷ್ಟ್ರ ದಿಂದ ಬರತೇತಿ.

ಸುಮಾರು ಎರಡು – ಮೂರು ಸಾವಿರ ಕಿಲೋಮಿಟರು ದೂರದಿಂದ ಅಕ್ಕಿ ಸಾಗಣೆ ಮಾಡೋ ಖರ್ಚನ್ನ ರಾಜ್ಯ ಸರಕಾರ ಹೊರತೇತಿ. ಅದರ ಬದಲಿಗೆ ಅದ 27 ರೂಪಾಯಿ ರಾಜ್ಯಕ್ಕ ಕೊಟ್ಟರ, ನಮ್ಮ ರೈತರು ಬೆಳದ ಅಕ್ಕಿ ನಾವು ಖರೀದಿಸಿ ರೊಕ್ಕ ಉಳಿಸಬಹುದು, ಕಿರಿಕಿರಿ ಇರಲಾರದೇ ಹಂಚಬಹುದು.

ವಿಕೇಂದ್ರಿಕೃತ ವ್ಯವಸ್ಥೆ ಜಾರಿ ಆದರ ಉತ್ತರ ಕರ್ನಾಟಕದಾಗ ಜೋಳ, ದಕ್ಷಿಣದಾಗ ರಾಗಿ, ಕರಾವಳಿಯೊಳಗ ಕೆಂಪು ಅಕ್ಕಿ ಖರೀದಿಸಿ, ಅಲ್ಲಲ್ಲೇ ಹಂಚಬಹುದು.

ಅದಕ್ಕ ಒಮ್ಮೆ ಹಿಂದಿನ ಮುಖ್ಯಮಂತ್ರಿ ಸಿದ್ರಾಮಯ್ಯನವರು ದೂರದರ್ಶನದಾಗ ಫೋನು ಇನ್ನು ಕಾರ್ಯಕ್ರಮ ನಡೆಸಿದಾಗ ಕಾರ್ಯಕರ್ತರೊಬ್ಬರು ಇದು ಅನ್ನ ಭಾಗ್ಯ ಅಲ್ಲ, ಸರಿಯಾಗಿ ಜಾರಿಮಾಡಿದರೆ ಅದು ರೈತ ಭಾಗ್ಯ. ಸರಕಾರ ರೈತರಿಂದ ಜೋಳ -ಕಾಳು ಖರೀದಿಸಿದರೆ ರೈತರಿಗೆ- ಗೃಹಿಣಿಯರಿಗೆ ಇಬ್ಬರಿಗೂ ಅನುಕೂಲ ಅಂತ ಹೇಳಿದ್ದರು. ಮುಖ್ಯಮಂತ್ರಿಗಳಿಗೆ ಐಡಿಯಾ ಇಷ್ಟ ಆತು, ಖರೆ, ಆದರಿ ವಿಧಾನಸೌಧದ ಪಟ್ಟ ಭದ್ರ ಕಪಾಟುಗಳಲ್ಲಿ ಆ ಫೈಲು ಥಂಡಿ ಹಿಡೀತು.

ಇನ್ನ ಸರಕಾರದವರು ಎಷ್ಟು ದಡ್ಡರು ಅಂದರ ಅವರು ಒಂದೇ ತಪ್ಪನ್ನ ಎರಡೆರಡು ಸರತೆ ಮಾಡತಾರು. ಉದಾಹರಣೆಗೆ ತೊಗರಿ ಕಾಳಿನ ಬೆಲೆ ಕುಸಿದರೆ ರೈತರಿಂದ ಖರೀದಿ ಮಾಡತಾರು. ಈ ವರ್ಷ 55 ರೂಪಾಯಿಗೆ ಒಂದು ಕೇಜಿಯಂತೆ ಖರೀದಿ ಮಾಡಿದಾರು. ಆರು ತಿಂಗಳ ಬಿಟ್ಟು ಮಿಲ್ಲು ಮಾಲಿಕರು ಹಾಗೂ ಮಧ್ಯವರ್ತಿಗಳಿಂದ ಸರಕಾರಿ ಹಾಸ್ಟೆಲ್ಲುಗಳ ಹುಡುಗರ ಸಲುವಾಗಿ 90 ರೂಪಾಯಿಗೆ ತೊಗರಿ ಬೇಳೆ ಖರೀದಿ ಮಾಡತಾರು. ರೈತರಿಂದ ಖರೀದಿ ಮಾಡಿದ ತೊಗರಿ ಕಾಳನ್ನೇ ಮಿಲ್ಲಿನಲ್ಲಿ ಒಡೆದು ಹಾಕಿಸಿ ಹಾಸ್ಟೆಲ್ಲಿಗೆ ಪೂರೈಸೋವಷ್ಟು ಕನಿಷ್ಟ ಸಾಮಾನ್ಯ ಜ್ಞಾನ ಅವರಿಗೆ ಇಲ್ಲ.

ಮೂರನೇಯದು ಇಂದಿರಾ ಕ್ಯಾಂಟೀನು. ಮೊದಲನೆಯದು ಅದರ ಹೆಸರ ಹಿಂದಿನ ರಾಜಕೀಯ. ಕಾಂಗ್ರೆಸ್ಸಿನವರು ಇಂದಿರಮ್ಮಾ ಕ್ಯಾಂಟಿನ ಅಂತ ಮಾಡಿದ್ದರ ಅದರ ಇಂದಿರಾ ತಗದು ಅಮ್ಮಾ ಅಂತ ಭಾಜಪ ದವರು ಮುಂದು ವರೆಸಬಹುದಿತ್ತು. ಇಲ್ಲಾ ಅಂದರ ಅನ್ನಪೂರ್ಣಾ ಅಡುಗೆ ಮನೆ ಅಂತಾದರೂ ಇವರು ಬದಲಾಯಿಸಬೇಕಾಗಿತ್ತು. ಅಥವಾ ಅದ ಕೆಲಸಾ ಕಾಂಗ್ರೆಸ್ಸಿನವರು ಮಾಡಬೇಕಿತ್ತು. ಅದುನೂ ಆಗಲಿಲ್ಲ.

ಎರಡನೇಯದ್ದು ಅವಕ್ಕೆ ರಾಜ್ಯ ಖಜಾನೆಯಿಂದ ಹಣ ಹೊಂದಿಸೋ ಕೆಲಸ ಸಿದ್ರಾಮಯ್ಯನವರು ಮಾಡಲಿಲ್ಲ. ಅವರು ಮಾಡಿದ್ದು ಎರಡು ತಪ್ಪು. ಅವನ್ನು ನಗರ ಪಾಲಿಕೆ ಅಥವಾ ಸ್ಥಳೀಯ ಸಂಸ್ಥೆಯವರು ನಡೆಸಬೇಕು ಅನ್ನೋ ನಿಯಮ ಮಾಡಿದ್ದು. ಎರಡನೇಯದ್ದು ಗುತ್ತಿಗೆದಾರರ ಕೈಯೊಳಗ ಕೊಟ್ಟಿದ್ದು.

ಅವನ್ನು ತಮಿಳುನಾಡಿನ ರೀತಿ ಮಹಿಳಾ ಸ್ವಸಹಾಯ ಸಂಘಗಳ ಕೈಗೆ ಕೊಟ್ಟಿದ್ದರ ಅವು ಚಂದಾಗಿ ನಡೆಸಿಕೊಂಡು ಬರತಿದ್ದರು. ಏಳು ವರ್ಷದ ಹಿಂದೆ ಸುರುವಾದ ಈ ಬಡವರ ಅಡುಗೆ ಮನೆಗಳು ಇಲ್ಲಿಯವರೆಗೆ 25 ಕೋಟಿ ಇಡ್ಲಿ, 30 ಕೋಟಿ ಚಪಾತಿ ಹಾಗೂ 20 ಕೋಟಿ ಪ್ಲೇಟು ಅನ್ನ ತಯಾರಿಸಿದ್ದಾವು. ಅವುಗಳ ಬೆಲೆ ಬದಲಾಗಿಲ್ಲ. ಈ ಲಾಕ್ ಡೌನ್ ಸಮಯದಾಗೂನು ಕೆಲಸ ಮಾಡಿದಾವು. ಬಡವರ ಪ್ರಾಣ ಕಾದವು.

ಆದರ ನಮ್ಮಲ್ಲೆ ಹಂಗ ಆಗಲಿಲ್ಲ. ಬಡವರು ಉಪವಾಸ ಬಿದ್ದರು. ಪ್ರವಾಸಿ ಕಾರ್ಮಿಕರು ಯಾವುದೋ ಸಂಘ ಸಂಸ್ಥೆಗಳು ಕೊಡೋ ಆಹಾರಕ್ಕ ಕಾಯ್ದು ಕೊಂಡು ದಿನಗಟ್ಟಲೇ ಇದ್ದರು. ಏನೂ ಸಿಗಲಾರದಾಗ ತಮ್ಮ ಹಣೆಬರಹಕ್ಕೆ ಬೈದುಕೊಂಡು ಸುಮ್ಮನೇ ಕಣ್ಣೀರು ಕುಡಿದು ಕುಂತರು.

ಇಂದಿರಾ ಕ್ಯಾಂಟೀನು ತಗದರ ಗದ್ದಲ ಆಗತೇತಿ ಅಂತ ಮುಚಿಕೊಂಡು ಕೂತರು. ಸಾರಾಯಿ ದುಕಾನು ತೆಗೆದು ಅಲ್ಲಿನ ಜನ ಜಂಗುಳಿ – ನೂಕು ನುಗ್ಗಲು ನೋಡಿ ಮುಸಿ ಮುಸಿ ನಕ್ಕ ನಮ್ಮ ಸರಕಾರ ಇಂದಿರಾ ಕ್ಯಾಂಟಿನ ತೆರೆಯಲಿಲ್ಲ. ಬಡವರಿಗೆ ಅನ್ನಕ್ಕಿಂತಲೂ ಎಣ್ಣೆ ಬೇಕು ಅಂತ ನಕ್ಕರು ಅಷ್ಟ.

ಇವೆಲ್ಲಾ ನಮ್ಮ ರೈತರ ಪರವಾಗಿ, ಮಹಿಳೆಯರ ಪರವಾಗಿ ಮಾತಾಡುವ ಪುಡಾರಿ ನಾಯಕರಿಗೆ ಕಾಣೋದಿಲ್ಲ. ಜನ ಜಾಗೃತಿ ಹೊರತು ಪ್ರಜಾಸತ್ತೆಗೆ ಬೇರೆ ಔಷಧಿ ಇಲ್ಲ ಅಂತ ಬೆಂಜಮಿನ್ ಫ್ರ‍್ಯಾಂಕ್ಲಿನ್ ಹೇಳಿದಂಗ, ನಮಗನ ತಿಳೀಲಿಲ್ಲಾ ಅಂದರ ನಮ್ಮ ನಾಯಕರಿಗೆ ಹೆಂಗ ತಿಳೀಬೇಕು?


ಇದನ್ನೂ ಓದಿ: ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...