Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...