Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...