Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...