Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...