Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...