Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...