Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...