Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...