Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...