Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...