Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...