Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...