Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...