Homeಅಂತರಾಷ್ಟ್ರೀಯನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ಮಾರಿಷಸ್‌ನ ಹೊಸ ಸುಪ್ರೀಂ ಕೋರ್ಟ್ ಕಟ್ಟಡವನ್ನು ಮಾರಿಷಸ್‌ ಪ್ರಧಾನಿ ಪ್ರವೀಂದ್ ಜುಗ್ನಾಥ್ ಜೊತೆ ಜಂಟಿಯಾಗಿ ಉದ್ಘಾಟನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಮಾರಿಷಸ್‌ ರಾಜಧಾನಿ ಪೋರ್ಟ್ ಲೂಯಿಸ್‌ನ ಹೊಸ ಸುಪ್ರೀಂ ಕೋರ್ಟ್ ಕಟ್ಟಡವನ್ನು ಮಾರಿಷಸ್‌ ಪ್ರಧಾನಿ ಪ್ರವೀಂದ್ ಜುಗ್ನಾಥ್ ಜೊತೆ ಜಂಟಿಯಾಗಿ ಉದ್ಘಾಟನೆ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಭಾರತದ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ ಎಂದು ಹೇಳಿದ್ದಾರೆ.

ಆನ್‌ಲೈನ್‌ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, “ಅಭಿವೃದ್ಧಿ ಸಹಭಾಗಿತ್ವದ ಹೆಸರಿನಲ್ಲಿ ರಾಷ್ಟ್ರಗಳನ್ನು ಹೇಗೆ ಅವಲಂಬನೆಯ ಸಹಭಾಗಿತ್ವಕ್ಕೆ ಒತ್ತಾಯಿಸಲಾಯಿತು ಎಂದು ಇತಿಹಾಸವು ನಮಗೆ ಕಲಿಸಿದೆ” ಎಂದು ಹೇಳಿದರು.

’’ಇದು ವಸಾಹತುಶಾಹಿ ಮತ್ತು ಸಾಮ್ರಾಜ್ಯಶಾಹಿ ಆಡಳಿತಕ್ಕೆ ನಾಂದಿ ಹಾಡಿತು. ಹಾಗೆಯೇ ಜಾಗತಿಕ ಪವರ್ ಬ್ಲಾಕ್‌ಗಳಿಗೆ ನಾಂದಿ ಹಾಡಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಮರುಪಾವತಿ ಮಾಡಲಾಗದ ಸಾಲಗಳನ್ನು ಎದುರಿಸುತ್ತಿರುವ ಇತರ ರಾಷ್ಟ್ರಗಳ ಮೇಲೆ ಒತ್ತಡ ಹೇರುವ ಮೂಲಕ ಒಪ್ಪಂದಗಳನ್ನು ತನ್ನ ಪರವಾಗಿ ಹತೋಟಿಗೆ ತರಲು ಚೀನಾದ “ಜಾಗತಿಕ ಸಾಲ-ರಾಜತಾಂತ್ರಿಕತೆ” ಯ ಬಗ್ಗೆ ಹೆಚ್ಚುತ್ತಿರುವ ಆರೋಪಗಳ ಮಧ್ಯೆ ಪ್ರಧಾನ ಮಂತ್ರಿಯ ಈ ಹೇಳಿಕೆಗಳು ಮುಖ್ಯವಾದವುಗಳಾಗಿವೆ.

“ಭಾರತಕ್ಕೆ ಸಂಬಂಧಿಸಿದಂತೆ, ಅಭಿವೃದ್ಧಿ ಸಹಕಾರದಲ್ಲಿ ಅತ್ಯಂತ ಮೂಲಭೂತ ತತ್ವವೆಂದರೆ ನಮ್ಮ ಪಾಲುದಾರರನ್ನು ಗೌರವಿಸುವುದು” ಎಂದು ಅವರು ಹೇಳಿದರು.

“ಅಭಿವೃದ್ಧಿ ಪಾಠಗಳ ಈ ಹಂಚಿಕೆ ನಮ್ಮ ಏಕೈಕ ಪ್ರೇರಣೆ. ಅದಕ್ಕಾಗಿಯೇ ನಮ್ಮ ಅಭಿವೃದ್ಧಿ ಸಹಕಾರವು ಯಾವುದೇ ಷರತ್ತುಗಳೊಂದಿಗೆ ಬರುವುದಿಲ್ಲ” ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.

ಪೋರ್ಟ್ ಲೂಯಿಸ್‌ನಲ್ಲಿನ ಹೊಸ ಸುಪ್ರೀಂ ಕೋರ್ಟ್ ಕಟ್ಟಡವು ಭಾರತ-ಮಾರಿಷಸ್ ಸಹಕಾರ ಮತ್ತು ಹಂಚಿಕೆಯ ಮೌಲ್ಯಗಳ ಸಂಕೇತವಾಗಿದೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದರು.


ಇದನ್ನೂ ಓದಿ: ಅಸೆಂಬ್ಲಿ ಅಧಿವೇಶನಕ್ಕೆ ಹಾಜರಾಗುತ್ತೇವೆ: ಪೈಲಟ್ ಬಣದ ಶಾಸಕರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...