Homeಮುಖಪುಟಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ, ‘ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ)’ ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ಹೇಳಿದೆ.

- Advertisement -
- Advertisement -

ದೇಶದಲ್ಲಿ ಇಂಟರ್‌ನೆಟ್‌‌ ಬ್ಯಾನ್‌‌ ಬಗ್ಗೆ ಯಾವುದೇ ಕೇಂದ್ರೀಕೃತ ಮಾಹಿತಿಯಿಲ್ಲ ಮತ್ತು ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ಬಗ್ಗೆ ಸರ್ಕಾರವು ರಾಷ್ಟ್ರೀಯ ದತ್ತಾಂಶವನ್ನು ಸಹ ನಿರ್ವಹಿಸುವುದಿಲ್ಲ ಎಂದು ಗೃಹ ಸಚಿವಾಲಯ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ನಿಯಂತ್ರಿಸುವ ವಿಧಾನದ ಬಗ್ಗೆಗಿನ ವಿವರಗಳನ್ನು ಸಚಿವಾಲಯ ಒದಗಿಸಿದ್ದು, ಇಂಟರ್‌ನೆಟ್‌ ಬ್ಯಾನ್‌ ಮಾಡುವುದರಿಂದ ವದಂತಿಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

“ಇಂಟರ್‌‌ನೆಟ್‌ನಲ್ಲಿ ಮಾಹಿತಿಯು ವೇಗವಾಗಿ ಹರಿಯುತ್ತದೆ ಹಾಗೂ ದುರುಪಯೋಗದ ಸಾಧ್ಯತೆಯು ಇದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳು ಟೆಲಿಕಾಂ ಸೇವೆಗಳನ್ನು / ಇಂಟರ್ನೆಟ್ ಬ್ಯಾನ್‌ ಮಾಡುತ್ತಾರೆ” ಎಂದು ಗೃಹ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಸದನಕ್ಕೆ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಯ್, “ಒಂದು ನಿರ್ದಿಷ್ಟ ಸಮುದಾಯಗಳ ವಿರುದ್ಧ ಅಥವಾ ಅವರ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿಯ ಬಗ್ಗೆ ನಿರ್ದಿಷ್ಟ ಡೇಟಾವನ್ನು ಕೇಂದ್ರೀತವಾಗಿ ನಿರ್ವಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹಿಂದೂ ದೇವಾಲಯಗಳ ಮೇಲಿನ ದಾಳಿಯಲ್ಲಿ ಹಠಾತ್ ಏರಿಕೆ ಕಂಡುಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ಸಾರ್ವಜನಿಕ ಆದೇಶ ಮತ್ತು ಪೊಲೀಸರು ರಾಜ್ಯದ ವಿಷಯವಾಗಿರುವುದರಿಂದ, ಅಪರಾಧ ತಡೆಗಟ್ಟುವಿಕೆ, ಪತ್ತೆ, ನೋಂದಣಿ, ತನಿಖೆ ಮತ್ತು ವಿಚಾರಣೆ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಅಡಿಯಲ್ಲಿ ಬರುತ್ತದೆ” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ತಿಳಿಸಿದೆ. ಆದಾಗ್ಯೂ, ಸಚಿವಾಲಯ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ 2017 ರಿಂದ ಯುಎಪಿಎ ಮತ್ತು ದೇಶದ್ರೋಹ ಕಾನೂನುಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳು ಸ್ಥಿರವಾಗಿ ಏರಿಕೆಯಾಗಿದೆ. 2015 ರಿಂದ ಯುಎಪಿಎ ಅಡಿಯಲ್ಲಿ 5,128 ಮತ್ತು ದೇಶದ್ರೋಹದ ಆರೋಪದ ಅಡಿಯಲ್ಲಿ 229 ಪ್ರಕರಣಗಳು ಭಾರತದಾದ್ಯಂತ ದಾಖಲಾಗಿವೆ.

ರಾಜ್ಯಸಭೆಯ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ, ಕೇಂದ್ರ ಗೃಹ ಸಚಿವ ಜಿ. ಕಿಶನ್ ರೆಡ್ಡಿ, ಇಂಟರ್‌ನೆಟ್‌‌ನಿಂದ ಎದುರಾಗುವ ಸವಾಲುಗಳು ಹಲವು, ಅದು ಅದರ ವಿಶಾಲತೆ ಮತ್ತು ಗಡಿ ರಹಿತವಾಗಿ ಹರಿಯುತ್ತದೆ. ಅಲ್ಲದೆ ಇಂಟರ್‌ನೆಟ್‌ನಲ್ಲಿನ ಮಾಹಿತಿಯು ವೇಗವಾಗಿ ಹರಿಯುತ್ತದೆ ಮತ್ತು ಇದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯು ಇದೆ ಎಂದು ಹೇಳಿದ್ದಾರೆ.

“ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಸರ್ಕಾರದ ಅಧಿಕಾರಿಗಳು, ‘ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ತಿದ್ದುಪಡಿ) ನಿಯಮಗಳು-2020’ ರಲ್ಲಿ ವ್ಯಾಖ್ಯಾನಿಸಲಾದ ಕಾರ್ಯವಿಧಾನಗಳ ಪ್ರಕಾರ ಟೆಲಿಕಾಂ ಸೇವೆಗಳನ್ನು ಸ್ಥಗಿತಗೊಳಿಸುವುದು ಮತ್ತು ಇಂಟರ್ನೆಟ್ ಬ್ಯಾನ್ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ವಿಡಿಯೋ ನೋಡಿ>> ರೈತರಿಗೆ ಸಬ್ಸಿಡಿ ಎಂಬುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....