Homeಮುಖಪುಟಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ, ‘ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ)’ ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ಹೇಳಿದೆ.

- Advertisement -
- Advertisement -

ದೇಶದಲ್ಲಿ ಇಂಟರ್‌ನೆಟ್‌‌ ಬ್ಯಾನ್‌‌ ಬಗ್ಗೆ ಯಾವುದೇ ಕೇಂದ್ರೀಕೃತ ಮಾಹಿತಿಯಿಲ್ಲ ಮತ್ತು ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ಬಗ್ಗೆ ಸರ್ಕಾರವು ರಾಷ್ಟ್ರೀಯ ದತ್ತಾಂಶವನ್ನು ಸಹ ನಿರ್ವಹಿಸುವುದಿಲ್ಲ ಎಂದು ಗೃಹ ಸಚಿವಾಲಯ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ನಿಯಂತ್ರಿಸುವ ವಿಧಾನದ ಬಗ್ಗೆಗಿನ ವಿವರಗಳನ್ನು ಸಚಿವಾಲಯ ಒದಗಿಸಿದ್ದು, ಇಂಟರ್‌ನೆಟ್‌ ಬ್ಯಾನ್‌ ಮಾಡುವುದರಿಂದ ವದಂತಿಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

“ಇಂಟರ್‌‌ನೆಟ್‌ನಲ್ಲಿ ಮಾಹಿತಿಯು ವೇಗವಾಗಿ ಹರಿಯುತ್ತದೆ ಹಾಗೂ ದುರುಪಯೋಗದ ಸಾಧ್ಯತೆಯು ಇದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳು ಟೆಲಿಕಾಂ ಸೇವೆಗಳನ್ನು / ಇಂಟರ್ನೆಟ್ ಬ್ಯಾನ್‌ ಮಾಡುತ್ತಾರೆ” ಎಂದು ಗೃಹ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಸದನಕ್ಕೆ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಯ್, “ಒಂದು ನಿರ್ದಿಷ್ಟ ಸಮುದಾಯಗಳ ವಿರುದ್ಧ ಅಥವಾ ಅವರ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿಯ ಬಗ್ಗೆ ನಿರ್ದಿಷ್ಟ ಡೇಟಾವನ್ನು ಕೇಂದ್ರೀತವಾಗಿ ನಿರ್ವಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹಿಂದೂ ದೇವಾಲಯಗಳ ಮೇಲಿನ ದಾಳಿಯಲ್ಲಿ ಹಠಾತ್ ಏರಿಕೆ ಕಂಡುಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ಸಾರ್ವಜನಿಕ ಆದೇಶ ಮತ್ತು ಪೊಲೀಸರು ರಾಜ್ಯದ ವಿಷಯವಾಗಿರುವುದರಿಂದ, ಅಪರಾಧ ತಡೆಗಟ್ಟುವಿಕೆ, ಪತ್ತೆ, ನೋಂದಣಿ, ತನಿಖೆ ಮತ್ತು ವಿಚಾರಣೆ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಅಡಿಯಲ್ಲಿ ಬರುತ್ತದೆ” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ತಿಳಿಸಿದೆ. ಆದಾಗ್ಯೂ, ಸಚಿವಾಲಯ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ 2017 ರಿಂದ ಯುಎಪಿಎ ಮತ್ತು ದೇಶದ್ರೋಹ ಕಾನೂನುಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳು ಸ್ಥಿರವಾಗಿ ಏರಿಕೆಯಾಗಿದೆ. 2015 ರಿಂದ ಯುಎಪಿಎ ಅಡಿಯಲ್ಲಿ 5,128 ಮತ್ತು ದೇಶದ್ರೋಹದ ಆರೋಪದ ಅಡಿಯಲ್ಲಿ 229 ಪ್ರಕರಣಗಳು ಭಾರತದಾದ್ಯಂತ ದಾಖಲಾಗಿವೆ.

ರಾಜ್ಯಸಭೆಯ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ, ಕೇಂದ್ರ ಗೃಹ ಸಚಿವ ಜಿ. ಕಿಶನ್ ರೆಡ್ಡಿ, ಇಂಟರ್‌ನೆಟ್‌‌ನಿಂದ ಎದುರಾಗುವ ಸವಾಲುಗಳು ಹಲವು, ಅದು ಅದರ ವಿಶಾಲತೆ ಮತ್ತು ಗಡಿ ರಹಿತವಾಗಿ ಹರಿಯುತ್ತದೆ. ಅಲ್ಲದೆ ಇಂಟರ್‌ನೆಟ್‌ನಲ್ಲಿನ ಮಾಹಿತಿಯು ವೇಗವಾಗಿ ಹರಿಯುತ್ತದೆ ಮತ್ತು ಇದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯು ಇದೆ ಎಂದು ಹೇಳಿದ್ದಾರೆ.

“ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಸರ್ಕಾರದ ಅಧಿಕಾರಿಗಳು, ‘ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ತಿದ್ದುಪಡಿ) ನಿಯಮಗಳು-2020’ ರಲ್ಲಿ ವ್ಯಾಖ್ಯಾನಿಸಲಾದ ಕಾರ್ಯವಿಧಾನಗಳ ಪ್ರಕಾರ ಟೆಲಿಕಾಂ ಸೇವೆಗಳನ್ನು ಸ್ಥಗಿತಗೊಳಿಸುವುದು ಮತ್ತು ಇಂಟರ್ನೆಟ್ ಬ್ಯಾನ್ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ವಿಡಿಯೋ ನೋಡಿ>> ರೈತರಿಗೆ ಸಬ್ಸಿಡಿ ಎಂಬುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...