Homeಮುಖಪುಟಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ತಿಳಿಸಿದ್ದು, ಇದನ್ನು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಸಂಸದೀಯ ಸಮಿತಿಗೆ ಬುಧವಾರ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ದೆಹಲಿಯ ಚರ್ಚ್‌ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊವನ್ನು ಬಜರಂಗದಳವು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದಿದ್ದರೂ ಸಹ ಬಜರಂಗದಳವನ್ನು ನಿಷೇಧಿಸಲು ಫೇಸ್‌ಬುಕ್‌ ಮುಂದಾಗಿರಲಿಲ್ಲ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಅಜಿತ್‌ ಮೋಹನ್‌ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

“ಬಜರಂಗದಳದ ಪೋಸ್ಟ್‌ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್‌ಬುಕ್‌ ಇಂಡಿಯಾ ಕಂಪನಿಗೆ ಇರಲಿಲ್ಲ” ಎಂದು ಅಜಿತ್‌ ಮೋಹನ್‌ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...