Homeಮುಖಪುಟಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ತಿಳಿಸಿದ್ದು, ಇದನ್ನು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಸಂಸದೀಯ ಸಮಿತಿಗೆ ಬುಧವಾರ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ದೆಹಲಿಯ ಚರ್ಚ್‌ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊವನ್ನು ಬಜರಂಗದಳವು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದಿದ್ದರೂ ಸಹ ಬಜರಂಗದಳವನ್ನು ನಿಷೇಧಿಸಲು ಫೇಸ್‌ಬುಕ್‌ ಮುಂದಾಗಿರಲಿಲ್ಲ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಅಜಿತ್‌ ಮೋಹನ್‌ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

“ಬಜರಂಗದಳದ ಪೋಸ್ಟ್‌ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್‌ಬುಕ್‌ ಇಂಡಿಯಾ ಕಂಪನಿಗೆ ಇರಲಿಲ್ಲ” ಎಂದು ಅಜಿತ್‌ ಮೋಹನ್‌ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....