Homeಮುಖಪುಟಸಚಿನ್ ಪೈಲಟ್ ಕಾಂಗ್ರೆಸ್ ತೊರೆಯಲು ಕಾರಣವಾದ ಮೂರು ಪ್ರಮುಖ ಬೇಡಿಕೆಗಳಿವು...!!

ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯಲು ಕಾರಣವಾದ ಮೂರು ಪ್ರಮುಖ ಬೇಡಿಕೆಗಳಿವು…!!

ಸಚಿನ್ ಪಕ್ಷದ ನಾಯಕತ್ವದ ಮುಂದೆ ಮೂರು ಷರತ್ತುಗಳನ್ನು ಇಟ್ಟಿದ್ದು ಪಕ್ಷವು ಅದನ್ನು ಪೂರೈಸಲು ಸಾಧ್ಯವಿಲ್ಲ ಎಂದಿದೆ.

- Advertisement -
- Advertisement -

ಸಚಿನ್ ಪೈಲಟ್ “ಯಾವಾಗಲೂ ನನ್ನ ಹೃದಯದಲ್ಲಿರುತ್ತಾರೆ” ಎಂದು ಸೋಮವಾರ ರಾಹುಲ್ ಗಾಂಧಿಯವರ ಕಚೇರಿಯಿಂದ ಘೋಷಿಸಿ, ಅವರು ಹಿಂತಿರುಗಿ ಸಮಸ್ಯೆಗಳನ್ನು ಬಗೆಹರಿಸುವಂತೆ ಪಕ್ಷವು ಹಲವು ಬಾರಿ ವಿನಂತಿ ಮಾಡಿದ 24 ಗಂಟೆಗಳ ಒಳಗೆ ಅಶೋಕ್ ಗೆಹ್ಲೋಟ್ ಅವರ ಮಂತ್ರಿ ಮಂಡಲದಿಂದ ಸಚಿನ್ ಪೈಲಟ್ ಅವರನ್ನು ಉಪಮಂತ್ರಿ ಸ್ಥಾನದಿಂದ ಕೈಬಿಡಲಾಗಿದೆ.

ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ಸಚಿನ್ ಪೈಲಟ್ ಪಕ್ಷದಿಂದ ನಿರ್ಗಮಿಸಲು ಕಾರಣವಾದ ಪ್ರಮುಖ ಘಟನೆಗಳನ್ನು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಹೆಸರು ಹೇಳಲು ಇಚ್ಚಿಸದ ಹಿರಿಯ ನಾಯಕರ ಪ್ರಕಾರ, ಸಚಿನ್ ಪಕ್ಷದ ನಾಯಕತ್ವದ ಮುಂದೆ ಮೂರು ಷರತ್ತುಗಳನ್ನು ಇಟ್ಟಿದ್ದು ಪಕ್ಷವು ಅದನ್ನು ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದೆ ಎನ್ನಲಾಗಿದೆ.

ಮೊದಲನೆಯದು, ನಾಲ್ಕು ವರ್ಷಕ್ಕೆ ವಿಧಾನಸಭೆಯನ್ನು ವಿಸರ್ಜಿಸಿ 2022 ರಲ್ಲಿ ಚುನಾವಣೆಗೆ ಹೋಗಬೇಕು. ಮುಂದಿನ ರಾಜ್ಯ ಚುನಾವಣೆಗೆ ಒಂದು ವರ್ಷದ ಮೊದಲು ಕಾಂಗ್ರೆಸ್ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು.

ಎರಡನೆಯ ಬೇಡಿಕೆಯೆಂದರೆ, ಸಚಿನ್‌ರೊಂದಿಗೆ ಬಂಡಾಯವೆದ್ದ ಎಲ್ಲಾ ಶಾಸಕರಿಗೂ ಮಂತ್ರಿ ಸ್ಥಾನ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಅಥವಾ ಇತರ ಯಾವುದೇ ಸ್ಥಾನಮಾನಗಳನ್ನು ನೀಡಬೇಕು.

ಮೂರನೆಯ ಮತ್ತು ಅಂತಿಮ ಬೇಡಿಕೆಯೆಂದರೆ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಅವರನ್ನು ಅವರ ಹುದ್ದೆಯಿಂದ ಕಿತ್ತು ಹಾಕಿ ಅವರ ಜಾಗಕ್ಕೆ ಬೇರೆ ಜನರನ್ನು ನೇಮಿಸಬೇಕು. ಅವಿನಾಶ್ ಪಾಂಡೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪರ ಇರುತ್ತಾರೆ ಎಂದು ಸಚಿನ್ ಪೈಲಟ್‌ ಭಾವನೆಯಾಗಿದೆ ಎನ್ನಲಾಗಿದೆ.

“ನಾವು ಅವನನ್ನು ವಾಪಾಸು ಕರೆತರಲು ನಿಜವಾಗಿಯೂ ಪ್ರಯತ್ನಿಸಿದ್ದೇವೆ ಆದರೆ ಇದು ಬ್ಲ್ಯಾಕ್‌ ಮೇಲ್‌ ಆಗಿರುವುದರಿಂದ ಅವರ ಷರತ್ತುಗಳನ್ನು ನಾವು ಒಪ್ಪಲು ಸಾಧ್ಯವಾಗಲಿಲ್ಲ. ಒಂದು ವೇಳೆ ಒಪ್ಪಿದ್ದರೆ ಇತರ ರಾಜ್ಯಗಳಲ್ಲಿಯೂ ಉಳಿದವರು ಇದೇ ದಾರಿಯನ್ನು ಬಳಸಲು ಪ್ರಾರಂಭಿಸಿದರೆ?” ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹೇಳಿದ್ದಾರೆ. ಈ ಬಗ್ಗೆ ಸಚಿನ್ ಇನ್ನೂ ಯಾವುದೆ ಪ್ರತಿಕ್ರಿಯೆ ನೀಡಲಿಲ್ಲ .

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತ್ತೆ ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿ ಎಂದು ತಮ್ಮ ಪಕ್ಷಕ್ಕೆ ನಿರ್ದೇಶನ ನೀಡಿದ್ದರು ಎನ್ನಲಾಗಿದೆ.

ಸಚಿನ್ ನಡೆಯನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, “ಸಚಿನ್ ಮತ್ತು ಅವರ ಬೆಂಬಲಿಗರು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಉರುಳಿಸುವ ಬಿಜೆಪಿಯ ಪಿತೂರಿಯಲ್ಲಿ ಭಾಗಿಯಾಗಿದ್ದಕ್ಕೆ ನಮಗೆ ವಿಷಾದವಿದೆ.’’ ಎಂದು ತೀವ್ರವಾಗಿ ಖಂಡಿಸಿದ್ದಾರೆ.


ಓದಿ: ಉಪಮುಖ್ಯಮಂತ್ರಿ, ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಸಚಿನ್ ಪೈಲಟ್ ವಜಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...