Homeಮುಖಪುಟಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು.

- Advertisement -
- Advertisement -

ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್‌ಎನ್‌ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.

ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ

ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ ಎಂದು ಅನಂತ್‌ ಕುಮಾರ್ ಹೆಗಡೆ ಹೇಳಿದ್ದಾರೆ.

ವಿಡಿಯೋ ನೋಡಿ

ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್‌ಎನ್‌‌ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde

Posted by Naanu Gauri on Tuesday, August 11, 2020

ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.

ಸಂಸದರ ಹೇಳಿಕೆಗೆ ಭಾರೀ ವಿರೋಧ

ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್‌ಎನ್‌ಎಲ್‌ನ ಮಂಗಳೂರಿನ ಸಬ್‌ಡಿವಿಸಿನ್‌ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್‌ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್‌ ಫೈಬರ್‌ಗಳನ್ನು ಜೋಡಿಸಿದವರು ಬಿಎಸ್‌ಎನ್‌ಎಲ್‌ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್‌ಎನ್‌ಎಲ್‌ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್‌ಎನ್‌ಎಲ್‌ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್‌ಎನ್ಎಲ್‌ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...