Homeಮುಖಪುಟಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು.

- Advertisement -
- Advertisement -

ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್‌ಎನ್‌ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.

ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ

ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ ಎಂದು ಅನಂತ್‌ ಕುಮಾರ್ ಹೆಗಡೆ ಹೇಳಿದ್ದಾರೆ.

ವಿಡಿಯೋ ನೋಡಿ

ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್‌ಎನ್‌‌ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde

Posted by Naanu Gauri on Tuesday, August 11, 2020

ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.

ಸಂಸದರ ಹೇಳಿಕೆಗೆ ಭಾರೀ ವಿರೋಧ

ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್‌ಎನ್‌ಎಲ್‌ನ ಮಂಗಳೂರಿನ ಸಬ್‌ಡಿವಿಸಿನ್‌ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್‌ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್‌ ಫೈಬರ್‌ಗಳನ್ನು ಜೋಡಿಸಿದವರು ಬಿಎಸ್‌ಎನ್‌ಎಲ್‌ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್‌ಎನ್‌ಎಲ್‌ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್‌ಎನ್‌ಎಲ್‌ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್‌ಎನ್ಎಲ್‌ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...