Homeಮುಖಪುಟಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು.

- Advertisement -
- Advertisement -

ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್‌ಎನ್‌ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.

ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ

ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ ಎಂದು ಅನಂತ್‌ ಕುಮಾರ್ ಹೆಗಡೆ ಹೇಳಿದ್ದಾರೆ.

ವಿಡಿಯೋ ನೋಡಿ

ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್‌ಎನ್‌‌ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde

Posted by Naanu Gauri on Tuesday, August 11, 2020

ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.

ಸಂಸದರ ಹೇಳಿಕೆಗೆ ಭಾರೀ ವಿರೋಧ

ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್‌ಎನ್‌ಎಲ್‌ನ ಮಂಗಳೂರಿನ ಸಬ್‌ಡಿವಿಸಿನ್‌ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್‌ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್‌ ಫೈಬರ್‌ಗಳನ್ನು ಜೋಡಿಸಿದವರು ಬಿಎಸ್‌ಎನ್‌ಎಲ್‌ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್‌ಎನ್‌ಎಲ್‌ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್‌ಎನ್‌ಎಲ್‌ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್‌ಎನ್ಎಲ್‌ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...