ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್ಎನ್ಎಲ್ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್ಎನ್ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.
ಬಿಎಸ್ಎನ್ಎಲ್ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.
ಬಿಎಸ್ಎನ್ಎಲ್ ಮುಗಿಸುತ್ತೇವೆ
ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್ಎನ್ಎಲ್ ನೆಟ್ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್ಎನ್ಎಲ್ ಮುಗಿಸುತ್ತೇವೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ವಿಡಿಯೋ ನೋಡಿ
ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್ಎನ್ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde
Posted by Naanu Gauri on Tuesday, August 11, 2020
ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.
ಸಂಸದರ ಹೇಳಿಕೆಗೆ ಭಾರೀ ವಿರೋಧ
ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್ಎನ್ಎಲ್ನ ಮಂಗಳೂರಿನ ಸಬ್ಡಿವಿಸಿನ್ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್ ಫೈಬರ್ಗಳನ್ನು ಜೋಡಿಸಿದವರು ಬಿಎಸ್ಎನ್ಎಲ್ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.
ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್ಎನ್ಎಲ್ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್ಎನ್ಎಲ್ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್ಎನ್ಎಲ್ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್ಎನ್ಎಲ್ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್ಎನ್ಎಲ್ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಕೇಂದ್ರ @BJP4India ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ
ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ!https://t.co/1JZBZQqWFP
— Karnataka Congress (@INCKarnataka) August 11, 2020
ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು