Homeಮುಖಪುಟಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು.

- Advertisement -
- Advertisement -

ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್‌ಎನ್‌ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.

ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ

ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ ಎಂದು ಅನಂತ್‌ ಕುಮಾರ್ ಹೆಗಡೆ ಹೇಳಿದ್ದಾರೆ.

ವಿಡಿಯೋ ನೋಡಿ

ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್‌ಎನ್‌‌ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde

Posted by Naanu Gauri on Tuesday, August 11, 2020

ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.

ಸಂಸದರ ಹೇಳಿಕೆಗೆ ಭಾರೀ ವಿರೋಧ

ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್‌ಎನ್‌ಎಲ್‌ನ ಮಂಗಳೂರಿನ ಸಬ್‌ಡಿವಿಸಿನ್‌ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್‌ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್‌ ಫೈಬರ್‌ಗಳನ್ನು ಜೋಡಿಸಿದವರು ಬಿಎಸ್‌ಎನ್‌ಎಲ್‌ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್‌ಎನ್‌ಎಲ್‌ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್‌ಎನ್‌ಎಲ್‌ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್‌ಎನ್ಎಲ್‌ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...