Homeಕರ್ನಾಟಕಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

- Advertisement -
- Advertisement -

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ. ಸಾವಿರ ಡಾಲರ್ ನೀಡಿ ಅನ್‍ಲೈನ್‍ನಲ್ಲಿ ಗೌರವ ಡಾಕ್ಟರೇಟ್ ಪಡೆಯುವಂತಹ ಪರಿಸ್ಥಿತಿ ಇದೆ. ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಬೇಕು ಎಂದು ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಸುದ್ಧಿ ಸಂಪಾದಕ ಡಾ.ಮೈ.ಸಿ.ಪಾಟೀಲ್ ತಿಳಿಸಿದರು.
ತುಮಕೂರು ನಗರದ ಕನ್ನಡಭವನದಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪಿಎಚ್‍ಡಿ ಪಡೆದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಗೌಡ (ಗೌರವ ಡಾಕ್ಟರೇಟ್) ಪಡೆಯುವಲ್ಲಿ ಅಕ್ರಮ, ಅನ್ಯಾಯ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ಹೋದರೆ ಅರ್ಜಿದಾರನಿಗೆ ದಂಡ ಹಾಕಲಾಯಿತು. ನ್ಯಾಯಾಧೀಶರೂ ಕೂಡ ಅಕ್ರಮಗಳನ್ನೇ ಸಮರ್ಥಿಸುವಂತಹ ವಾತಾವರಣ ಇರುವುದು ವಿಷಾದನೀಯ. ಹಾಗಾಗಿ ಅಕ್ರಮ ವಿಶ್ವವಿದ್ಯಾಲಯಗಳ ಬಗ್ಗೆ ಎಚ್ಚರಿಕೆ ಇರಬೇಕು. ಗೌರವ ಡಾಕ್ಟರೇಟ್ ವ್ಯಕ್ತಿಯ ಗೌರವ ಹೆಚ್ಚಿಸುವ ಬದಲು ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿವೆ. ಅಂತಹ ವಿವಿಗಳಿಂದ ಡಾಕ್ಟರೇಟ್ ಪಡೆಯಬಾರದು. ಅತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾರ್ಥ ಇನ್‍ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಡಾ.ಎನ್.ಎಸ್.ರವಿಕುಮಾರ್, ಬೇರೆಯವರು ಬರೆದದ್ದನ್ನೇ ಯಥಾವತ್ತಾಗಿ ಹಾಕಿಕೊಂಡು ಪಿಎಚ್‌ಡಿ ಮಾಡುವುದು ಬೇಡ. ಅದು ಕನ್ನಡಕ್ಕೆ ಎಸಗಿದ ದ್ರೋಹವಾಗುತ್ತದೆ. ನಕಲು ಮಾಡಿದರೆ ಮೋಸ ಮಾಡಿದಂತೆ ಆಗುತ್ತದೆ. ಬೇಕಾದರೆ ಬೇರೆಯವರು ಏನು ಬರೆದು ನಿಲ್ಲಿಸಿದ್ದಾರೋ ಅಲ್ಲಿಂದ ಬೇಕಾದರೆ ಮುಂದುವರಿಸಿ ಪಿಎಚ್‌ಡಿ ಬರೆಯಿರಿ. ಅದು ಬಿಟ್ಟು ನಕಲು ಒಳ್ಳೆಯ ಲಕ್ಷಣವಲ್ಲ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪ್ರಾಸ್ತಾವಿಕ ಮಾತನಾಡಿ, ಕನ್ನಡದ ಅಸ್ಮಿತೆ ಕಳೆದುಹೋಗುತ್ತಿರುವ ಸಂದರ್ಭ ಇದು. ಕನ್ನಡ ಅಂದರೆ ಭಾಷೆ, ನಾಡು, ಬದುಕು, ಜೀವನ ಕ್ರಮ, ಆಹಾರ ಪದ್ದತಿ ಎಲ್ಲವೂ ಆಗಿದೆ. ಒಂದು ಭಾಷೆ ಹೋದರೆ ಇದೆಲ್ಲವೂ ನಾಶವಾಗುತ್ತದೆ. ಬಹುಸಂಸ್ಕೃತಿಯ ಒಂದು ಕೊಂಡಿಹೋದರೂ ಆ ಜನಾಂಗದ ಇರುವಿಕೆಯೇ ಇಲ್ಲವಾಗುತ್ತದೆ. ಹಾಗಾಗಿ ಕನ್ನಡ ರಕ್ಷಣೆ ಮಾಡಬೇಕು ಎಂದು ಹೇಳಿದರು.

ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಪಿಎಚ್‌ಡಿ ಬರೆಯುವ ಸಂದರ್ಭದಲ್ಲಿ ಇಂತಹ ಪದಗಳು, ಇಂತಹ ವಾಕ್ಯ, ಇಂತಹ ವಸ್ತು ಇರಬಾರದು ಎಂಬ ನಿಯಮಗಳು ಬರಬಹುದು. ಇದನ್ನು ಮನಗಂಡು ಪಿಎಚ್‌ಡಿ ಪಡೆದಿರುವವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸೂಕ್ಷ್ಮ ಸನ್ನಿವೇಶದಲ್ಲಿ ಸಾಹಿತ್ಯದ ಉಳಿವಿಗೆ ಸಾಹಿತ್ಯ ಪರಿಷತ್ ಇರುತ್ತದೆ. ತಾವು ಕೂಡ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಒಳ್ಳೆಯದಾಗುತ್ತದೆ. ಬುದ್ದ ಬಸವ, ಅಂಬೇಡ್ಕರ್, ಕುವೆಂಪು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...