Homeಕರ್ನಾಟಕಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

- Advertisement -
- Advertisement -

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ. ಸಾವಿರ ಡಾಲರ್ ನೀಡಿ ಅನ್‍ಲೈನ್‍ನಲ್ಲಿ ಗೌರವ ಡಾಕ್ಟರೇಟ್ ಪಡೆಯುವಂತಹ ಪರಿಸ್ಥಿತಿ ಇದೆ. ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಬೇಕು ಎಂದು ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಸುದ್ಧಿ ಸಂಪಾದಕ ಡಾ.ಮೈ.ಸಿ.ಪಾಟೀಲ್ ತಿಳಿಸಿದರು.
ತುಮಕೂರು ನಗರದ ಕನ್ನಡಭವನದಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪಿಎಚ್‍ಡಿ ಪಡೆದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಗೌಡ (ಗೌರವ ಡಾಕ್ಟರೇಟ್) ಪಡೆಯುವಲ್ಲಿ ಅಕ್ರಮ, ಅನ್ಯಾಯ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ಹೋದರೆ ಅರ್ಜಿದಾರನಿಗೆ ದಂಡ ಹಾಕಲಾಯಿತು. ನ್ಯಾಯಾಧೀಶರೂ ಕೂಡ ಅಕ್ರಮಗಳನ್ನೇ ಸಮರ್ಥಿಸುವಂತಹ ವಾತಾವರಣ ಇರುವುದು ವಿಷಾದನೀಯ. ಹಾಗಾಗಿ ಅಕ್ರಮ ವಿಶ್ವವಿದ್ಯಾಲಯಗಳ ಬಗ್ಗೆ ಎಚ್ಚರಿಕೆ ಇರಬೇಕು. ಗೌರವ ಡಾಕ್ಟರೇಟ್ ವ್ಯಕ್ತಿಯ ಗೌರವ ಹೆಚ್ಚಿಸುವ ಬದಲು ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿವೆ. ಅಂತಹ ವಿವಿಗಳಿಂದ ಡಾಕ್ಟರೇಟ್ ಪಡೆಯಬಾರದು. ಅತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾರ್ಥ ಇನ್‍ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಡಾ.ಎನ್.ಎಸ್.ರವಿಕುಮಾರ್, ಬೇರೆಯವರು ಬರೆದದ್ದನ್ನೇ ಯಥಾವತ್ತಾಗಿ ಹಾಕಿಕೊಂಡು ಪಿಎಚ್‌ಡಿ ಮಾಡುವುದು ಬೇಡ. ಅದು ಕನ್ನಡಕ್ಕೆ ಎಸಗಿದ ದ್ರೋಹವಾಗುತ್ತದೆ. ನಕಲು ಮಾಡಿದರೆ ಮೋಸ ಮಾಡಿದಂತೆ ಆಗುತ್ತದೆ. ಬೇಕಾದರೆ ಬೇರೆಯವರು ಏನು ಬರೆದು ನಿಲ್ಲಿಸಿದ್ದಾರೋ ಅಲ್ಲಿಂದ ಬೇಕಾದರೆ ಮುಂದುವರಿಸಿ ಪಿಎಚ್‌ಡಿ ಬರೆಯಿರಿ. ಅದು ಬಿಟ್ಟು ನಕಲು ಒಳ್ಳೆಯ ಲಕ್ಷಣವಲ್ಲ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪ್ರಾಸ್ತಾವಿಕ ಮಾತನಾಡಿ, ಕನ್ನಡದ ಅಸ್ಮಿತೆ ಕಳೆದುಹೋಗುತ್ತಿರುವ ಸಂದರ್ಭ ಇದು. ಕನ್ನಡ ಅಂದರೆ ಭಾಷೆ, ನಾಡು, ಬದುಕು, ಜೀವನ ಕ್ರಮ, ಆಹಾರ ಪದ್ದತಿ ಎಲ್ಲವೂ ಆಗಿದೆ. ಒಂದು ಭಾಷೆ ಹೋದರೆ ಇದೆಲ್ಲವೂ ನಾಶವಾಗುತ್ತದೆ. ಬಹುಸಂಸ್ಕೃತಿಯ ಒಂದು ಕೊಂಡಿಹೋದರೂ ಆ ಜನಾಂಗದ ಇರುವಿಕೆಯೇ ಇಲ್ಲವಾಗುತ್ತದೆ. ಹಾಗಾಗಿ ಕನ್ನಡ ರಕ್ಷಣೆ ಮಾಡಬೇಕು ಎಂದು ಹೇಳಿದರು.

ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಪಿಎಚ್‌ಡಿ ಬರೆಯುವ ಸಂದರ್ಭದಲ್ಲಿ ಇಂತಹ ಪದಗಳು, ಇಂತಹ ವಾಕ್ಯ, ಇಂತಹ ವಸ್ತು ಇರಬಾರದು ಎಂಬ ನಿಯಮಗಳು ಬರಬಹುದು. ಇದನ್ನು ಮನಗಂಡು ಪಿಎಚ್‌ಡಿ ಪಡೆದಿರುವವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸೂಕ್ಷ್ಮ ಸನ್ನಿವೇಶದಲ್ಲಿ ಸಾಹಿತ್ಯದ ಉಳಿವಿಗೆ ಸಾಹಿತ್ಯ ಪರಿಷತ್ ಇರುತ್ತದೆ. ತಾವು ಕೂಡ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಒಳ್ಳೆಯದಾಗುತ್ತದೆ. ಬುದ್ದ ಬಸವ, ಅಂಬೇಡ್ಕರ್, ಕುವೆಂಪು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...