Homeಕರ್ನಾಟಕಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

- Advertisement -
- Advertisement -

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ. ಸಾವಿರ ಡಾಲರ್ ನೀಡಿ ಅನ್‍ಲೈನ್‍ನಲ್ಲಿ ಗೌರವ ಡಾಕ್ಟರೇಟ್ ಪಡೆಯುವಂತಹ ಪರಿಸ್ಥಿತಿ ಇದೆ. ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಬೇಕು ಎಂದು ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಸುದ್ಧಿ ಸಂಪಾದಕ ಡಾ.ಮೈ.ಸಿ.ಪಾಟೀಲ್ ತಿಳಿಸಿದರು.
ತುಮಕೂರು ನಗರದ ಕನ್ನಡಭವನದಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪಿಎಚ್‍ಡಿ ಪಡೆದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಗೌಡ (ಗೌರವ ಡಾಕ್ಟರೇಟ್) ಪಡೆಯುವಲ್ಲಿ ಅಕ್ರಮ, ಅನ್ಯಾಯ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ಹೋದರೆ ಅರ್ಜಿದಾರನಿಗೆ ದಂಡ ಹಾಕಲಾಯಿತು. ನ್ಯಾಯಾಧೀಶರೂ ಕೂಡ ಅಕ್ರಮಗಳನ್ನೇ ಸಮರ್ಥಿಸುವಂತಹ ವಾತಾವರಣ ಇರುವುದು ವಿಷಾದನೀಯ. ಹಾಗಾಗಿ ಅಕ್ರಮ ವಿಶ್ವವಿದ್ಯಾಲಯಗಳ ಬಗ್ಗೆ ಎಚ್ಚರಿಕೆ ಇರಬೇಕು. ಗೌರವ ಡಾಕ್ಟರೇಟ್ ವ್ಯಕ್ತಿಯ ಗೌರವ ಹೆಚ್ಚಿಸುವ ಬದಲು ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿವೆ. ಅಂತಹ ವಿವಿಗಳಿಂದ ಡಾಕ್ಟರೇಟ್ ಪಡೆಯಬಾರದು. ಅತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾರ್ಥ ಇನ್‍ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಡಾ.ಎನ್.ಎಸ್.ರವಿಕುಮಾರ್, ಬೇರೆಯವರು ಬರೆದದ್ದನ್ನೇ ಯಥಾವತ್ತಾಗಿ ಹಾಕಿಕೊಂಡು ಪಿಎಚ್‌ಡಿ ಮಾಡುವುದು ಬೇಡ. ಅದು ಕನ್ನಡಕ್ಕೆ ಎಸಗಿದ ದ್ರೋಹವಾಗುತ್ತದೆ. ನಕಲು ಮಾಡಿದರೆ ಮೋಸ ಮಾಡಿದಂತೆ ಆಗುತ್ತದೆ. ಬೇಕಾದರೆ ಬೇರೆಯವರು ಏನು ಬರೆದು ನಿಲ್ಲಿಸಿದ್ದಾರೋ ಅಲ್ಲಿಂದ ಬೇಕಾದರೆ ಮುಂದುವರಿಸಿ ಪಿಎಚ್‌ಡಿ ಬರೆಯಿರಿ. ಅದು ಬಿಟ್ಟು ನಕಲು ಒಳ್ಳೆಯ ಲಕ್ಷಣವಲ್ಲ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪ್ರಾಸ್ತಾವಿಕ ಮಾತನಾಡಿ, ಕನ್ನಡದ ಅಸ್ಮಿತೆ ಕಳೆದುಹೋಗುತ್ತಿರುವ ಸಂದರ್ಭ ಇದು. ಕನ್ನಡ ಅಂದರೆ ಭಾಷೆ, ನಾಡು, ಬದುಕು, ಜೀವನ ಕ್ರಮ, ಆಹಾರ ಪದ್ದತಿ ಎಲ್ಲವೂ ಆಗಿದೆ. ಒಂದು ಭಾಷೆ ಹೋದರೆ ಇದೆಲ್ಲವೂ ನಾಶವಾಗುತ್ತದೆ. ಬಹುಸಂಸ್ಕೃತಿಯ ಒಂದು ಕೊಂಡಿಹೋದರೂ ಆ ಜನಾಂಗದ ಇರುವಿಕೆಯೇ ಇಲ್ಲವಾಗುತ್ತದೆ. ಹಾಗಾಗಿ ಕನ್ನಡ ರಕ್ಷಣೆ ಮಾಡಬೇಕು ಎಂದು ಹೇಳಿದರು.

ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಪಿಎಚ್‌ಡಿ ಬರೆಯುವ ಸಂದರ್ಭದಲ್ಲಿ ಇಂತಹ ಪದಗಳು, ಇಂತಹ ವಾಕ್ಯ, ಇಂತಹ ವಸ್ತು ಇರಬಾರದು ಎಂಬ ನಿಯಮಗಳು ಬರಬಹುದು. ಇದನ್ನು ಮನಗಂಡು ಪಿಎಚ್‌ಡಿ ಪಡೆದಿರುವವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸೂಕ್ಷ್ಮ ಸನ್ನಿವೇಶದಲ್ಲಿ ಸಾಹಿತ್ಯದ ಉಳಿವಿಗೆ ಸಾಹಿತ್ಯ ಪರಿಷತ್ ಇರುತ್ತದೆ. ತಾವು ಕೂಡ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಒಳ್ಳೆಯದಾಗುತ್ತದೆ. ಬುದ್ದ ಬಸವ, ಅಂಬೇಡ್ಕರ್, ಕುವೆಂಪು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...