Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....