Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...