Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...