Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...