Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...