Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...