Homeಮುಖಪುಟ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

ಮಾರ್ಚ್ 19 ರಂದು ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು

- Advertisement -
- Advertisement -

ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಇತ್ತೀಚೆಗೆ ಉತ್ತರ ಪ್ರದೇಶದ ರೈಲು ಪ್ರಯಾಣದ ಸಂದರ್ಭದಲ್ಲಿ “ಹಲ್ಲೆ ನಡೆಸಿದ್ದಾರೆ” ಎಂಬ ಆರೋಪವನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೋಮವಾರ ತಳ್ಳಿಹಾಕಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ .

“ಯಾವುದೇ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ… ಕೇರಳದ ಮುಖ್ಯಮಂತ್ರಿ ಸಂಪೂರ್ಣವಾಗಿ ಸುಳ್ಳು ಹೇಳುತ್ತಿದ್ದು, ಅವರು ತಪ್ಪು ಹೇಳಿಕೆಯನ್ನು ನೀಡುತ್ತಿದ್ದಾರೆ” ಎಂದು ರಾಜ್ಯದ ಕೊಚ್ಚಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಯೂಷ್‌ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಮಾರ್ಚ್ 19 ರಂದು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯ ಪ್ರತಿಧ್ವನಿಗಳು ಕೇರಳದ ಚುನಾವಣ ಕಣದಲ್ಲಿ ಮೂಡಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರದ ವಿರುದ್ದ ದಾಳಿ ನಡೆಸಿದ್ದರು. ಇದರಿಂದಾಗಿ ಕೇಂದ್ರ ಸಚಿವ ಅಮಿತ್‌ ಆರೋಪಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಘಟನೆಯಲ್ಲಿ ಸನ್ಯಾಸಿನಿಯರ ವಿರುದ್ಧವೆ ದೂರು ದಾಖಲಾಗಿತ್ತು.

‘ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ | NaanuGauri
PC: National Herald

ದೂರು ಪಡೆದ ನಂತರ ಸ್ಥಳೀಯ ಪೊಲೀಸರು ದೂರು ಸರಿಯಾಗಿದೆಯೇ ಎಂದು ತನಿಖೆ ನಡೆಸಿದ್ದಾರೆ ಎಂದು ಪಿಯೂಷ್‌ ಗೋಯಲ್ ಹೇಳಿದ್ದಾರೆ.

“ಒಂದು ಆರೋಪವಿತ್ತು. ಕೆಲವು ಜನರು ಸನ್ಯಾಸಿನಿಯರ ವಿರುದ್ಧ ದೂರು ನೀಡಿದರು. ದೂರು ಸರಿಯಾಗಿದೆಯೇ ಅಥವಾ ತಪ್ಪಾಗಿದೆಯೇ ಎಂದು ಕಂಡುಹಿಡಿಯುವುದು ಪೊಲೀಸರ ಕರ್ತವ್ಯ. ಅದಕ್ಕಾಗಿ ಪೊಲೀಸರು ವಿಚಾರಣೆ ನಡೆಸಿದರು. ಅವರು ಸರಿಯಾದ ಉದ್ದೇಶಕ್ಕಾಗಿ ಹೋಗುವ ನಿಜವಾದ ಪ್ರಯಾಣಿಕರು ಎಂದು ಖಚಿತಪಡಿಸಿಕೊಳ್ಳಲು ಅವರ ಎಲ್ಲ ದಾಖಲೆಗಳನ್ನು ಪರಿಶೀಲಿಸಲಾಗಿದೆ. ನಂತರ ತಕ್ಷಣ ಅವರನ್ನು ಹೋಗಲು ಬಿಡಲಾಗಿದೆ” ಎಂದು ಪೊಲೀಸರ ಕ್ರಮವನ್ನು ಸಮರ್ಥಿಸುತ್ತಾ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ಸಂಘ ಪರಿವಾರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ವಿದ್ಯಾರ್ಥಿಗಳು ಸನ್ಯಾಸಿನಿಯರನ್ನು ರೈಲಿನಿಂದ ಹೊರಗೆಳೆದು ದೂಡಿದ್ದಾರೆ ಎಂಬ ಆರೋಪವನ್ನು ರೈಲ್ವೆ ಸಚಿವರು ತಳ್ಳಿಹಾಕಿದ್ದಾರೆ. “ಅದು ಸಂಪೂರ್ಣವಾಗಿ ತಪ್ಪು” ಎಂದು ಅವರು ಹೇಳಿದ್ದಾರೆ.

ಸನ್ಯಾಸಿನಿಯರ ವಿರುದ್ಧ ಯಾರು ದೂರು ನೀಡಿದ್ದಾರೆ ಎಂದು ಸಚಿವರು ಹೇಳಲಿಲ್ಲ.

ಝಾನ್ಸಿಯಲ್ಲಿನ ಅಧಿಕಾರಿಗಳ ಪ್ರಕಾರ, ಮಾರ್ಚ್ 19 ರಂದು ಸ್ಥಳೀಯ ಭಜರಂಗದಳದ ಕಾರ್ಯಕರ್ತರು ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಬಲವಂತವಾಗಿ ಕರೆದೊಯ್ಯಲಾಗುತ್ತಿದೆ ಎಂದು ಸನ್ಯಾಸಿನಿಯರ ವಿರುದ್ದ ದೂರು ನೀಡಿದ್ದಾರೆ ಎಂದು ವದಿಯಾಗಿದೆ.

ಇದನ್ನೂ ಓದಿ: ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...