Homeಮುಖಪುಟ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

ಮಾರ್ಚ್ 19 ರಂದು ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು

- Advertisement -
- Advertisement -

ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಇತ್ತೀಚೆಗೆ ಉತ್ತರ ಪ್ರದೇಶದ ರೈಲು ಪ್ರಯಾಣದ ಸಂದರ್ಭದಲ್ಲಿ “ಹಲ್ಲೆ ನಡೆಸಿದ್ದಾರೆ” ಎಂಬ ಆರೋಪವನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೋಮವಾರ ತಳ್ಳಿಹಾಕಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ .

“ಯಾವುದೇ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ… ಕೇರಳದ ಮುಖ್ಯಮಂತ್ರಿ ಸಂಪೂರ್ಣವಾಗಿ ಸುಳ್ಳು ಹೇಳುತ್ತಿದ್ದು, ಅವರು ತಪ್ಪು ಹೇಳಿಕೆಯನ್ನು ನೀಡುತ್ತಿದ್ದಾರೆ” ಎಂದು ರಾಜ್ಯದ ಕೊಚ್ಚಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಯೂಷ್‌ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಮಾರ್ಚ್ 19 ರಂದು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯ ಪ್ರತಿಧ್ವನಿಗಳು ಕೇರಳದ ಚುನಾವಣ ಕಣದಲ್ಲಿ ಮೂಡಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರದ ವಿರುದ್ದ ದಾಳಿ ನಡೆಸಿದ್ದರು. ಇದರಿಂದಾಗಿ ಕೇಂದ್ರ ಸಚಿವ ಅಮಿತ್‌ ಆರೋಪಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಘಟನೆಯಲ್ಲಿ ಸನ್ಯಾಸಿನಿಯರ ವಿರುದ್ಧವೆ ದೂರು ದಾಖಲಾಗಿತ್ತು.

‘ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ | NaanuGauri
PC: National Herald

ದೂರು ಪಡೆದ ನಂತರ ಸ್ಥಳೀಯ ಪೊಲೀಸರು ದೂರು ಸರಿಯಾಗಿದೆಯೇ ಎಂದು ತನಿಖೆ ನಡೆಸಿದ್ದಾರೆ ಎಂದು ಪಿಯೂಷ್‌ ಗೋಯಲ್ ಹೇಳಿದ್ದಾರೆ.

“ಒಂದು ಆರೋಪವಿತ್ತು. ಕೆಲವು ಜನರು ಸನ್ಯಾಸಿನಿಯರ ವಿರುದ್ಧ ದೂರು ನೀಡಿದರು. ದೂರು ಸರಿಯಾಗಿದೆಯೇ ಅಥವಾ ತಪ್ಪಾಗಿದೆಯೇ ಎಂದು ಕಂಡುಹಿಡಿಯುವುದು ಪೊಲೀಸರ ಕರ್ತವ್ಯ. ಅದಕ್ಕಾಗಿ ಪೊಲೀಸರು ವಿಚಾರಣೆ ನಡೆಸಿದರು. ಅವರು ಸರಿಯಾದ ಉದ್ದೇಶಕ್ಕಾಗಿ ಹೋಗುವ ನಿಜವಾದ ಪ್ರಯಾಣಿಕರು ಎಂದು ಖಚಿತಪಡಿಸಿಕೊಳ್ಳಲು ಅವರ ಎಲ್ಲ ದಾಖಲೆಗಳನ್ನು ಪರಿಶೀಲಿಸಲಾಗಿದೆ. ನಂತರ ತಕ್ಷಣ ಅವರನ್ನು ಹೋಗಲು ಬಿಡಲಾಗಿದೆ” ಎಂದು ಪೊಲೀಸರ ಕ್ರಮವನ್ನು ಸಮರ್ಥಿಸುತ್ತಾ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ಸಂಘ ಪರಿವಾರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ವಿದ್ಯಾರ್ಥಿಗಳು ಸನ್ಯಾಸಿನಿಯರನ್ನು ರೈಲಿನಿಂದ ಹೊರಗೆಳೆದು ದೂಡಿದ್ದಾರೆ ಎಂಬ ಆರೋಪವನ್ನು ರೈಲ್ವೆ ಸಚಿವರು ತಳ್ಳಿಹಾಕಿದ್ದಾರೆ. “ಅದು ಸಂಪೂರ್ಣವಾಗಿ ತಪ್ಪು” ಎಂದು ಅವರು ಹೇಳಿದ್ದಾರೆ.

ಸನ್ಯಾಸಿನಿಯರ ವಿರುದ್ಧ ಯಾರು ದೂರು ನೀಡಿದ್ದಾರೆ ಎಂದು ಸಚಿವರು ಹೇಳಲಿಲ್ಲ.

ಝಾನ್ಸಿಯಲ್ಲಿನ ಅಧಿಕಾರಿಗಳ ಪ್ರಕಾರ, ಮಾರ್ಚ್ 19 ರಂದು ಸ್ಥಳೀಯ ಭಜರಂಗದಳದ ಕಾರ್ಯಕರ್ತರು ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಬಲವಂತವಾಗಿ ಕರೆದೊಯ್ಯಲಾಗುತ್ತಿದೆ ಎಂದು ಸನ್ಯಾಸಿನಿಯರ ವಿರುದ್ದ ದೂರು ನೀಡಿದ್ದಾರೆ ಎಂದು ವದಿಯಾಗಿದೆ.

ಇದನ್ನೂ ಓದಿ: ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....