Homeಕರ್ನಾಟಕಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

“ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ”

- Advertisement -
- Advertisement -

“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ಮೂರನೇ ಸಂಚು ನಡೆದಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಮುಲ್ ಜತೆ ನಂದಿನಿ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿಕೆ ನೀಡಿದ್ದು ಮೊದಲ ಸಂಚಾಗಿತ್ತು. ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚಾಗಿತ್ತು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ” ಎಂದು ಅವರು ಆರೋಪಿಸಿದ್ದಾರೆ.

ಅಮುಲ್‌ ಹಾಲು, ಮೊಸರು ಮಾರಾಟಕ್ಕಾಗಿ ನಂದಿನಿ ಹಾಲು, ಮೊಸರಿನ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.

“ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ದೂರಿದ್ದಾರೆ.

“ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

“ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ” ಎಂದು ಟೀಕಿಸಿದ್ದಾರೆ.

“ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್‌.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್‌.ಡಿ.ರೇವಣ್ಣ ಅವರು ಕೆ.ಎಂ.ಎಫ್‌. ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್‌ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್‌ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ” ಎಂದು ಎಚ್ಚರಿಸಿದೆ.

“ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದು ಕರೆ ನೀಡಿದ್ದಾರೆ.

“ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್‌ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಮನವಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...